ಕಲಬುರಗಿ: ಹೆಂಡತಿಯನ್ನು ಮನೆಗೆ ಕರೆತರಲು ಹೋದಾಗ ಅಣ್ಣನಿಂದ ಪತಿಯ ಮೇಲೆ ಹಲ್ಲೆ, ಚಾಕು ಇರಿತ

ಅರುಣ್​ ಕುಮಾರ್​ ಬೆಳ್ಳಿ

Updated on: Apr 11, 2025 | 5:05 PM

ದ್ಯಾವಮ್ಮ ಹೇಳುವಂತೆ ಟೋನಿ ತಂಗಿಯನ್ನು ಆನಂದ್ ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಅದರೆ ಆಕೆಗೆ ಆನಂದ್ ಮೇಲೆ ಜಾಸ್ತಿ ಅಪನಂಬಿಕೆಯಂತೆ. ಫೋನ್ ಮಾಡಿದಾಗ ಆನಂದ್ ಫೋನ್ ಬ್ಯೂಸಿ ಬಂದರೆ ಯಾವ ಹುಡುಗಿ ಜೊತೆ ಮಾತಾಡುತ್ತಿದ್ದೆ ಅಂತ ಜಗಳ ಕಾಯುತ್ತಿದ್ದಳಂತೆ. ಮನೆಗೆ ತಡವಾಗಿ ಬಂದರೆ ಇಷ್ಟು ಹೊತ್ತು ಯಾವಳ ಜೊತೆ ಇದ್ದೆ ಅಂತ ಕಾದಾಡುತ್ತಿದ್ದಳಂತೆ.

ಕಲಬುರಗಿ, ಏಪ್ರಿಲ್ 11: ಕಲಬುರಗಿಯ ಗಾಜಿಪುರದಲ್ಲಿ ಕೊಲೆ ಯತ್ನವೊಂದು ನಡೆದಿದ್ದು ಹಲ್ಲೆಗೊಳಗಾದ ವಿವಾಹಿತ ಯುವಕನ ತಾಯಿ ತಮ್ಮ ಗೋಳನ್ನು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಈ ಮಹಿಳೆಯ ಹೆಸರು ದ್ಯಾವಮ್ಮ (Dyavamma) ಮತ್ತು ಅವರು ಹೇಳುವ ಪ್ರಕಾರ ಮಗ ಆನಂದ್ ತನ್ನ ಹೆಂಡತಿಯನ್ನು ಮನೆಗೆ ಕರೆತರಲೆಂದು ಪತ್ನಿಯ ತವರುಮನೆ ನಗರದಲ್ಲಿರುವ ಗಾಜಿಪುರ ಏರಿಯಾಗೆ ಹೋದಾಗ ಹೆಂಡತಿಯ ಅಣ್ಣ ಟೋನಿ ಹೆಸರಿನ ಯುವಕ ಚಾಕುವಿನ ಇರಿದು ಹತ್ಯೆ ಮಾಡುವ ಪ್ರಯತ್ನ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಆನಂದ್​​ನನ್ನು ಕಲಬುರಗಿ ಜಿಲ್ಲಾಸ್ಪತ್ರೆಯ ಟ್ರಾಮಾ ಕೇರ್​ಗೆ ದಾಖಲಿಸಲಾಗಿದೆ.

ಇದನ್ನೂ ಓದಿ:   Video: ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.