Shakti scheme from tomorrow: ಬಸ್ ಪ್ರಯಾಣಕ್ಕೆ ಹಣ ತೆರಬೇಕಿಲ್ಲ ಅಂತ ರಾಜ್ಯಾದಂತ ಮಹಿಳೆಯರು ಸಂತಸ ವ್ಯಕ್ತಪಡಿಸುತ್ತಿದ್ದಾರೆ!

ಅರುಣ್​ ಕುಮಾರ್​ ಬೆಳ್ಳಿ

Updated on: Jun 10, 2023 | 6:29 PM

ಧಾರವಾಡದ ನಿವಾಸಿಯಾಗಿರುವ ಡಾ ಯಶೋಧ (Dr Yashodha) ಹುಬ್ಬಳ್ಳಿಯಲ್ಲಿ ಕ್ಲಿನಿಕ್ ಇಟ್ಟುಕೊಂಡಿದ್ದಾರೆ.

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ (free bus travel) ನಾಳೆಯಿಂದ ಜಾರಿಗೆ ಬರಲಿದೆ. ಬೆಂಗಳೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ (CM Siddaramaiah) ಮಹತ್ವದ ಯೋಜನೆಗೆ ಚಾಲನೆ ನೀಡಲಿದ್ದಾರೆ. ರಾಜ್ಯದೆಲ್ಲೆಡೆ ಮಹಿಳೆಯರು ನಾಳೆಯಿಂದ ಬಸ್ ಪಯಣಕ್ಕೆ ಹಣ ವ್ಯಯಿಸಬೇಕಿಲ್ವಲ್ಲ ಅಂತ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಬೇರೆ ಬೇರೆ ಜಿಲ್ಲೆ ಮತ್ತು ನಗರ ಪ್ರದೇಶಗಳಲ್ಲಿರುವ ಟಿವಿ9 ವರದಿಗಾರರು ಮಹಿಳೆಯರೊಂದಿಗೆ ಮಾತಾಡಿದ ವಿಡಿಯೋಗಳನ್ನು ಕಳಿಸುತ್ತಿದ್ದಾರೆ. ಈ ವಿಡಿಯೋದಲ್ಲಿ ಹುಬ್ಬಳ್ಳಿಯ ದಂತವೈದ್ಯೆಯೊಬ್ಬರು ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಾ ಯೋಜನೆ ಬಗ್ಗೆ ಖುಷಿ ವ್ಯಕ್ತಪಡಿಸುತ್ತಿದ್ದಾರೆ. ಧಾರವಾಡದ ನಿವಾಸಿಯಾಗಿರುವ ಡಾ ಯಶೋಧ (Dr Yashodha) ಹುಬ್ಬಳ್ಳಿಯಲ್ಲಿ ಕ್ಲಿನಿಕ್ ಇಟ್ಟುಕೊಂಡಿದ್ದಾರೆ. ನಾಳೆಯಿಂದ ಪ್ರಯಾಣದ ವೆಚ್ಚ ಉಳಿಯುತ್ತೆ ಅಂತ ಅವರು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.