Free bus travel: ಉಚಿತ ಬಸ್ ಪ್ರಯಾಣ ಯೋಜನೆ ಜಾರಿ, ಎಲ್ಲ ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಸಂಖ್ಯೆಯೇ ದೊಡ್ಡದು!

Updated on: Jun 12, 2023 | 10:35 AM

ಕೇವಲ ಹಾಸನ ಮಾತ್ರವಲ್ಲ, ಬೇರೆ ಬೇರೆ ನಗರ ಮತ್ತು ಗ್ರಾಮೀಣ ಪ್ರದೇಶಗಳ ಬಸ್ ನಿಲ್ದಾಣಗಳಲ್ಲಿ ಈ ದೃಶ್ಯ ಸಾಮಾನ್ಯವಾಗಿತ್ತು.

ಹಾಸನ: ರಾಜ್ಯದೆಲ್ಲೆಡೆ ಉಚಿತ ಬಸ್ ಪ್ರಯಾಣ ಯೋಜನೆಗೆ ನಿನ್ನೆಯಿಂದ ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮತ್ತು ಇನ್ನೂ ಹಲವು ಸಚಿವರು, ಅಧಿಕಾರಿಗಳು ರವಿವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸ್ಕೀಮನ್ನು ಉದ್ಘಾಟಿಸಿದ್ದನ್ನು ನೀವು ಟಿವಿಗಳಲ್ಲಿ ನೋಡಿರುತ್ತೀರಿ. ನಿನ್ನೆ ರಜಾ ದಿನವಾಗಿದ್ದರಿಂದ ಹೆಚ್ಚು ಮಹಿಳೆಯರು ಬಸ್ ಗಳಲ್ಲಿ ಓಡಾಡಲಿಲ್ಲ ಅನ್ನೋದು ಸತ್ಯ. ಆದರೆ, ಇವತ್ತು ಎಲ್ಲಾ ಬಸ್ ನಿಲ್ದಾಣಗಳಲ್ಲಿ ಪುರುಷರಿಗಿಂತ ಜಾಸ್ತಿ ಮಹಿಳೆಯರು ಕಾಣಿಸುತ್ತಿದ್ದರು. ಹಾಸನದ ಕೇಂದ್ರ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯರ ದೊಡ್ಡ ಗುಂಪನ್ನು ಇಲ್ಲಿ ನೋಡಬಹುದು. ಕೇವಲ ಹಾಸನ ಮಾತ್ರವಲ್ಲ, ಬೇರೆ ಬೇರೆ ನಗರ ಮತ್ತು ಗ್ರಾಮೀಣ ಪ್ರದೇಶಗಳ ಬಸ್ ನಿಲ್ದಾಣಗಳಲ್ಲಿ ಈ ದೃಶ್ಯ ಸಾಮಾನ್ಯವಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More