AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Free Bus Effect: ಉಚಿತ ಬಸ್​​ನಲ್ಲಿ ಬಂದು ಮಾದಪ್ಪನ ಹುಂಡಿಗೆ ಕೋಟ್ಯಂತರ ರೂಪಾಯಿ ಸುರಿಯುತ್ತಿರುವ ಮಹಿಳೆಯರು!

Free Bus Effect: ಉಚಿತ ಬಸ್​​ನಲ್ಲಿ ಬಂದು ಮಾದಪ್ಪನ ಹುಂಡಿಗೆ ಕೋಟ್ಯಂತರ ರೂಪಾಯಿ ಸುರಿಯುತ್ತಿರುವ ಮಹಿಳೆಯರು!

ಸೂರಜ್ ಪ್ರಸಾದ್ ಎಸ್.ಎನ್
| Edited By: ಸಾಧು ಶ್ರೀನಾಥ್​|

Updated on: Jul 28, 2023 | 4:40 PM

Share

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮೇಲೆ ಮಹಿಳಾ ಭಕ್ತರು ತುಂಬಿತುಳುಕುತ್ತಿದ್ದಾರೆ. ಹೀಗೆ ಬಂದವರು ಮಲೆ ಮಾದಪ್ಪನ ಹುಂಡಿಗೆ ಭಾರೀ ಪ್ರಮಾಣದಲ್ಲಿ ಕಾಣೆಕೆ ಸಲ್ಲಿಸುತ್ತಿದ್ದಾರೆ.

ಚಾಮರಾಜನಗರ, ಜುಲೈ 28: ಎಲ್ಲ ಮಹಿಳೆಯರಿಗೂ ರಾಜ್ಯ ಸರ್ಕಾರಿ ಬಸ್​​​ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಎಫೆಕ್ಟ್ ರಾಜ್ಯ ದೇಗುಲಗಳ ಮೇಲೆ ಭಾರೀ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಯೋಜನೆ ಜಾರಿಗೆ ಬಂದಾಗಿನಿಂದ ರಾಜ್ಯದಲ್ಲಿ ಮಹಿಳೆಯರು ಭಕ್ತಿಪರವಶರಾಗಿದ್ದಾರೆ. ಅದರಲ್ಲೂ ಚಾಮರಾಜನಗರ (Chamarajanagar) ಜಿಲ್ಲೆಯಲ್ಲಿ ಬೆಟ್ಟದ ಮೇಲಿರುವ ಮಾದೇಶ್ವರನ ದರ್ಶನಕ್ಕೆ ಮಹಿಳೆಯರು ಭಾರೀ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು (Hanur) ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ (Male Mahadeshwar Hill) ಮೇಲೆ ಮಹಿಳಾ ಭಕ್ತರು ತುಂಬಿತುಳುಕುತ್ತಿದ್ದಾರೆ.

ಹೀಗೆ ಬಂದವರು ಮಲೆ ಮಾದಪ್ಪನ ಹುಂಡಿಗೆ ಭಾರೀ ಪ್ರಮಾಣದಲ್ಲಿ ಕಾಣೆಕೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ಮಾದಪ್ಪನ ಹುಂಡಿಯಲ್ಲಿ (Madappa Hundi) ಕೋಟಿ ಕೋಟಿ ಹಣ ಜಮೆ ಆಗ್ತಿದೆ. ಇದರಿಂದ 21 ದಿನಗಳಲ್ಲಿ ಮತ್ತೆ ಮಾದಪ್ಪ ಕೋಟ್ಯಾಧೀಶನಾಗಿದ್ದಾನೆ. ಕಾಣಿಕೆ ರೂಪದಲ್ಲಿ ಹುಂಡಿಯಲ್ಲಿ 1,56,38,122 ರೂ ಹಣ ಸಂಗ್ರಹವಾಗಿದೆ. ಭಕ್ತರು ತಮ್ಮ ಆರಾದ್ಯ ದೈವ ಮಾದಪ್ಪನಿಗೆ 6 ಲಕ್ಷಕ್ಕೂ ಹೆಚ್ಚು ಹಣವನ್ನು ನಾಣ್ಯ ರೂಪದಲ್ಲಿ ಸಮರ್ಪಣೆ ಮಾಡಿದ್ದಾರೆ. ಜೊತೆಗೆ 30 ಗ್ರಾಂ ಚಿನ್ನ,1ಕೆಜಿ 26 ಗ್ರಾಂ ಬೆಳ್ಳಿಯನ್ನೂ ಅರ್ಪಿಸಿದ್ದಾರೆ ಭಕ್ತರು.

 

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More