ಗೃಹಲಕ್ಷ್ಮಿ ಯೋಜನೆ ಹಣ ಮೂರು ತಿಂಗಳಿಂದ ಜಮೆಯಾಗಿಲ್ಲ ಎನ್ನುವ ಹಾಸನದ ಹೂವಾಡಗಿತ್ತಿ

ಅರುಣ್​ ಕುಮಾರ್​ ಬೆಳ್ಳಿ

Updated on: Aug 14, 2025 | 10:55 AM

ಹಾಸನ ಬಸ್ ಸ್ಟಾಪ್​ನಲ್ಲಿ ಬಸ್ಸಿಗಾಗಿ ಕಾಯುತ್ತಿರುವ ಮಂಜುಳ ಹೆಸರಿನ ಮಹಿಳೆ ಮೂರು ತಿಂಗಳಿಂದ ಹಣ ಬಂದಿರಲಿಲ್ಲ, ನಿನ್ನೆ ಹಾಕಿದ್ದಾರೆ ಎನ್ನುತ್ತಾರೆ. ಗೌರಿ ಹಬ್ಬ ಬರ್ತಾ ಇದೆ, ಹಾಗಾಗಿ ಹಣ ಹಾಕಿರಬಹುದು ಎಂದು ಅವರು ಹೇಳುತ್ತಾರೆ. ಬಸ್ಸಲ್ಲಿ ಕೂತಿರುವ ಮಹಿಳೆಯೊಬ್ಬರು ಮೊದಲೆಲ್ಲ ಹಣ ಬಂದಿಲ್ಲ ಎನ್ನುತ್ತಾರೆ. ಆದರೆ ಆಮೇಲೆ ದುಡ್ಡು ಹಾಕಿದ್ದಾರೆ ಅಂತ ಯಾರೋ ಹೇಳಿದರು, ತಾನಿನ್ನೂ ಚೆಕ್ ಮಾಡಿಲ್ಲ ಎನ್ನುತ್ತಾರೆ.

ಹಾಸನ, ಆಗಸ್ಟ್ 14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar ) ಅವರಿಗೆ ಮಾಧ್ಯಮದವರು ಗೃಹಲಕ್ಷ್ಮಿ ಯೋಜನೆಯ ದುಡ್ಡು ಮೂರ್ನಾಲ್ಕು ತಿಂಗಳಿಂದ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಅಂತ ಹೇಳಿದಾಗೆಲ್ಲ ಹಾಗೇನೂ ಇಲ್ಲ, ಕೊಂಚ ಟೆಕ್ನಿಕಲ್ ಸಮಸ್ಯೆ ಇತ್ತು, ಇನ್ನೊಂದೆರಡು ದಿನಗಳಲ್ಲಿ ಹಣ ಸೇರುತ್ತೆ ಅನ್ನುತ್ತಾರೆ! ಪ್ರತಿಬಾರಿ ಅದೇ ಹೇಳಿಕೆ. ಹಾಸನದ ಸರೋಜ ಹೆಸರಿನ ಹೂವಾಡಗಿತ್ತಿ ಸರ್ಕಾರ ನಮ್ಮನ್ನು ನಂಬಿಸಿ ವೋಟು ಹಾಕಿಸಿಕೊಂಡು ಮೋಸ ಮಾಡುತ್ತಿದೆ ಎನ್ನುತ್ತಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಅಂತ ಹಣ ಬಳಸುತ್ತಿದ್ದೆವು, ಮೂರು ತಿಂಗಳಿಂದ ಹಣ ಸಿಕ್ಕಿಲ್ಲ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ಮಾಡುತ್ತಿದೆಯಂತೆ, ಸಿಎಂ ಸಿದ್ದರಾಮಯ್ಯ ನಂಬರ್ ಇದ್ದಿದ್ದರೆ ನಾನೇ ಫೋನ್ ಮಾಡುತ್ತಿದ್ದೆ ಎನ್ನುತ್ತಾರೆ.

ಇದನ್ನೂ ಓದಿ:  ಇನ್ನು 8-10 ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ವರ್ಗಾಯಿಸುವ ಭರವಸೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.