Siddaramaiah; ಜೂನ್ 11ರಿಂದ ಕರ್ನಾಟಕದ ಮಹಿಳೆಯರು ರಾಜ್ಯದ ಯಾವುದೇ ಮೂಲೆಗೆ ಉಚಿತವಾಗಿ ಪ್ರಯಾಣಿಸಬಹುದು: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Jun 02, 2023 | 4:43 PM

ಈ ಗ್ಯಾರಂಟಿ ವಾತಾನುಕೂಲಿತ ಬಸ್ ಮತ್ತು ಪರರಾಜ್ಯದ ಮಹಿಳೆಯರಿಗೆ ಅನ್ವಯಿಸುವುದಿಲ್ಲ.

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ನೀಡಿದ ಎಲ್ಲ 5 ಗ್ಯಾರಂಟಿಗಳ (5 guarantees) ಅನುಷ್ಠಾನದ ವಿವರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ಘೋಷಿಸಿದರು. ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತಾಡಿದ ಮುಖ್ಯಮಂತ್ರಿ, ಮಹಿಳೆಯರಿಗೆ ಉಚಿತ ಬಸ್ ಗ್ಯಾರಂಟಿ ಇದೇ ತಿಂಗಳು 11 ರಿಂದ ಜಾರಿಯಾಗಲಿದೆ ಎಂದು ಹೇಳಿದರು. ಈ ಗ್ಯಾರಂಟಿ ಯೋಜನೆಯಡಿ ವಿದ್ಯಾರ್ಥಿನಿಯರೂ ಬರುತ್ತಾರೆ. ಮಹಿಳೆಯರು ಬಿಎಮ್ ಟಿಸಿ (BMTC) ಮತ್ತು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ (KSTRC) ಜೂನ್ 11 ರಿಂದ ಹಣ ಟಿಕೆಟ್ ಗೆ ಹಣ ತೆರದೆ ಪ್ರಯಾಣಿಸಬಹುದು. ಆದರೆ, ಕೇವಲ ಕರ್ನಾಟಕದೊಳಗೆ ಮಾತ್ರ ಅವರು ಪ್ರಯಾಣಿಸಬಹುದು. ಬೆಂಗಳೂರಿಂದ ಬೀದರ್ ಗೆ ಹೋಗಬಹುದು ಆದರೆ ಬೆಂಗಳೂರಿಂದ ತಿರುಪತಿ, ಚೆನೈ, ಹೊಸೂರು ಮೊದಲಾದ ಊರುಗಳಿಗೆ ಪ್ರಯಾಣಿಸಲಾಗದು. ಹಾಗೆಯೇ, ಈ ಗ್ಯಾರಂಟಿ ವಾತಾನುಕೂಲಿತ ಬಸ್ ಮತ್ತು ಪರರಾಜ್ಯದ ಮಹಿಳೆಯರಿಗೆ ಅನ್ವಯಿಸುವುದಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.