‘ಶಕ್ತಿ ಯೋಜನೆ’ ಎಫೆಕ್ಟ್​: ಅಪ್ಪು ಸಮಾಧಿಯ ದರ್ಶನಕ್ಕೆ ಮಹಿಳಾಭಿಮಾನಿಗಳ ದಂಡು

Updated on: Jun 26, 2023 | 1:17 PM

ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಶಕ್ತಿ ಯೋಜನೆ ಜಾರಿಗೆ ತಂದಿದ್ದಾರೆ. ಈಗ ಪುನೀತ್ ಸಮಾಧಿಗೆ ಮಹಿಳೆಯರು ಆಗಮಿಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಶಕ್ತಿ ಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆ ಅಡಿಯಲ್ಲಿ ಮಹಿಳೆಯರು ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಈ ಮೊದಲು ರಾಜ್ಯದ ವಿವಿಧ ಪುಣ್ಯ ಕ್ಷೇತ್ರಗಳಿಗೆ ಮಹಿಳೆಯರು ತೆರಳಿದ್ದರು. ಈಗ ಪುನೀತ್ (Puneeth Rajkumar) ಸಮಾಧಿಗೂ ಮಹಿಳೆಯರು ಆಗಮಿಸುತ್ತಿದ್ದಾರೆ. ನಾಡಿನ ಮೂಲೆ ಮೂಲೆಗಳಿಂದ ಮಹಿಳೆಯರು ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಆಗಮಿಸುತ್ತಿದ್ದಾರೆ. ‘ನಾವು ಬಡವರು. ನಾವು ಅಷ್ಟು ದೂರದಿಂದ ಬರೋದಕ್ಕೆ ಆಗುತ್ತಿರಲಿಲ್ಲ. ಸರ್ಕಾರ ಫ್ರೀ ಬಸ್ ಕೊಡ್ತು. ಹೀಗಾಗಿ ಪುನೀತ್ ಸಮಾಧಿ ದರ್ಶನಕ್ಕೆ ಬಂದೆವು’ ಎಂದು ಮಹಿಳೆಯರು ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More