ನ್ಯಾಯಾಲಯದ ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತಿಲ್ಲವೇ? ಜಿ ಪರಮೇಶ್ವರ್

ಹಿಂದೆ ಬಂಗಾರಪ್ಪನವರ ಸರ್ಕಾರ ನ್ಯಾಯಾಲಯ ಆದೇಶ ಧಿಕ್ಕರಿಸಿದಾಗ ಸೇನಾ ಪಡೆ ಕಳಿಸುವುದಾಗಿ ಸರ್ಕಾರಕ್ಕೆ ಎಚ್ಚರಿಸಲಾಗಿತ್ತು, ಅಂಥ ಸ್ಥಿತಿ ಉಂಟಾಗಲಿಲ್ಲ ಅದು ಬೇರೆ ವಿಷಯ. ಈ ಅತ್ಯಂತ ಬಿಕ್ಕಟ್ಟಿನ ಸ್ಥಿತಿಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ಜೊತೆ ಸಹಕರಿಸಬೇಕೇ ಹೊರತು ರಾಜಕೀಯ ಮಾಡಬಾರದು ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರು: ಗೃಹ ಸಚಿವ ಜಿ ಪರಮೇಶ್ವರ್ (G Parameshwara) ವಿಷಯ ಯಾವುದೇ ಆಗಿರಲಿ ಬಹಳ ವಿವೇಚನೆಯಿಂದ ಮಾತಾಡುವ ಜಾಯಮಾನದವರು, ಅವರ ಮಾತಿನಲ್ಲಿ ತೂಕವಿರುತ್ತದೆ,. ಕಾವೇರಿ ವಿವಾದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಪ್ರತಿಭಟನೆ ನಡೆಸಲಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಕುಮಾರಸ್ವಾಮಿ ಪ್ರತಿಭಟನೆ ಮಾಡಲಿ ಆದರೆ ಸರ್ಕಾರದ ವಿರುದ್ಧ ಮಾಡೋದ್ರಲ್ಲಿ ಏನರ್ಥ? ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ನಿನ್ನೆ ನ್ಯಾಯಾಲಯ ನೀಡಿರುವ ತೀರ್ಪಿನ ವಿರುದ್ಧ ಪ್ರತಿಭಟನೆ ಮಾಡಲಿ. ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಹಿಂದಿನ ಸರ್ಕಾರಗಳು ನೇಮಕ ಮಾಡಿರುವ ಕಾನೂನು ತಂಡವೇ ರಾಜ್ಯದ ಪರವಾಗಿ ವಾದಮಾಡುತ್ತಿದೆ. ಹಾಗಿದ್ದಲ್ಲಿ ಲೀಗಲ್ ಟೀಮ್ ಮತ್ತು ಸರ್ಕಾರ ಹೇಗೆ ಅಸಮರ್ಥ ಆಗುತ್ತವೆ ಎಂದು ಪರಮೇಶ್ವರ್ ಕೇಳಿದರು. ನ್ಯಾಯಾಲಯದ ಆದೇಶ ಪಾಲಿಸದಿದ್ದರೆ ಏನಾಗುತ್ತದೆ ಅಂತ ಕುಮಾರಸ್ವಾಮಿಗೆ ಗೊತ್ತಿಲ್ಲವೇ? ಹಿಂದೆ ಬಂಗಾರಪ್ಪನವರ ಸರ್ಕಾರ ನ್ಯಾಯಾಲಯ ಆದೇಶ ಧಿಕ್ಕರಿಸಿದಾಗ ಸೇನಾ ಪಡೆ ಕಳಿಸುವುದಾಗಿ ಸರ್ಕಾರಕ್ಕೆ ಎಚ್ಚರಿಸಲಾಗಿತ್ತು, ಅಂಥ ಸ್ಥಿತಿ ಉಂಟಾಗಲಿಲ್ಲ ಅದು ಬೇರೆ ವಿಷಯ. ಈ ಅತ್ಯಂತ ಬಿಕ್ಕಟ್ಟಿನ ಸ್ಥಿತಿಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ಜೊತೆ ಸಹಕರಿಸಬೇಕೇ ಹೊರತು ರಾಜಕೀಯ ಮಾಡಬಾರದು ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us