ಭ್ರಷ್ಟಾಚಾರ ಆರೋಪ; ವ್ಯಕ್ತಿಗತ ಟೀಕೆ ಮಾಡಲ್ಲ, ಪೂರ್ತಿ ಸಿದ್ದರಾಮಯ್ಯ ಸರ್ಕಾರ ರಾಜೀನಾಮೆ ನೀಡಬೇಕು: ಗೋವಿಂದ ಕಾರಜೋಳ, ಬಿಜೆಪಿ ನಾಯಕ

ಅಧಿಕಾರಕ್ಕೆ ಕೇವಲ ಮೂರು ತಿಂಗಳ ಆವಧಿಯಲ್ಲಿ ಸಿದ್ದರಾಮಯ್ಯ ಸರ್ಕಾಕದ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಾಮಗಾರಿಗಳನ್ನು ನಡೆಸಿರುವ ಗುತ್ತಿಗೆದಾರರು ಮಾಡುತ್ತಿದ್ದಾರೆ. ಬಿಲ್ ಗಳನ್ನು ಬಿಡುಗಡೆ ಮಾಡಲು ಕಮೀಶನ್ ಕೇಳಲಾಗುತ್ತಿದೆ ಎಂದು ಅವರು ಆರೋಪಿಸುತ್ತಿದ್ದಾರೆ.   

ಬಾಗಲಕೋಟೆ: ಇಡೀ ಸರ್ಕಾರದ ವಿರುದ್ಧ ಲಂಚಗುಳಿತನದ (corruption) ಆರೋಪ ಕೇಳಿಬಂದಿರುವುದರಿಂದ ಸಿದ್ದರಾಮಯ್ಯ ಸರ್ಕಾರ (Siddaramaiah Government) ಕೂಡಲೇ ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಗೋವಿಂದ ಕಾರಜೋಳ (Govind Karjol) ಹೇಳಿದರು, ಬಾಗಲಕೋಟೆಯಲ್ಲಿ ಗುರುವಾರ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಕಾರಜೋಳ ತಾನು ವ್ಯಕ್ತಿಗತವಾಗಿ ಯಾರ ಮೇಲೂ ಟೀಕೆ ಮಾಡೋದಿಲ್ಲ, ಅದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಚಿವ ಸಂಪುಟ ಅಧಿಕಾರ ತ್ಯಜಿಸಬೇಕು ಎಂದು ಹೇಳಿದರು. ಭ್ರಷ್ಟಾಚಾರ ನಡೆದಿಲ್ಲ, ರಾಜೀನಾಮೆ ನೀಡೋದಿಲ್ಲ ಅಂತ ಸರ್ಕಾರದ ಪ್ರತಿನಿಧಿಗಳು ಹೇಳಿದರೆ ಅದು ಭಂಡತನದ  ಮಾತಾಗುತ್ತದೆ, ಆರೋಪಗಳು ಎದುರಾದಾಗ, ಅದನ್ನು ಸ್ವಾಗತಿಸಿ ತನಿಖೆ ಮಾಡಿಸಲು ಮುಂದಾಗಬೇಕು ಎಂದು ಗೋವಿಂದ ಕಾರಜೋಳ ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us