ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ: ರಾಮು ರಾವ್ ಜೂಪಲ್ಲಿ

Updated on: Mar 23, 2026 | 10:26 PM

ಜಾಗತಿಕ ಪ್ರತಿಭೆಗಳ ಬೇಡಿಕೆಯನ್ನು ಪೂರೈಸಲು ಭಾರತ ಸಿದ್ಧವಾಗಿದೆ ಎಂದು ರಾಮು ರಾವ್ ಜುಪಲ್ಲಿ WITT ಶೃಂಗಸಭೆ 2026 ರಲ್ಲಿ ಹೇಳಿದರು. ಪ್ರಧಾನಮಂತ್ರಿ ಮೋದಿ ಅವರ ನಾಯಕತ್ವದಲ್ಲಿ, ಭಾರತವು ತನ್ನ ಯುವ ಜನಸಂಖ್ಯೆ, STEM ಸಾಮರ್ಥ್ಯ ಮತ್ತು ಡಿಜಿಟಲ್ ಮೂಲಸೌಕರ್ಯದ ಏಳು ಸ್ತಂಭಗಳ ಮೂಲಕ ವಿಶ್ವದ ಪ್ರತಿಭಾ ಕಾರ್ಖಾನೆಯಾಗಿ ಹೊರಹೊಮ್ಮಿದೆ. ಆರ್ಥಿಕ ಅಸ್ಥಿರತೆಯ ನಡುವೆಯೂ ಭಾರತದ ಪಾತ್ರ ನಿರ್ಣಾಯಕವಾಗಿದೆ.

ನವದೆಹಲಿ, ಮಾರ್ಚ್​ 23: ನಾವು ಇಂದು ಇತಿಹಾಸದ ಒಂದು ಪ್ರಮುಖ ಘಟ್ಟದಲ್ಲಿದ್ದೇವೆ. ಇಡೀ ವಿಶ್ವವೇ ಆರ್ಥಿಕ ಸಂಕಷ್ಟದಿಂದ ಪರದಾಡುತ್ತಿದೆ. ನಮ್ಮ ಭಾರತ ದೇಶಕ್ಕೂ ಇದರ ಬಿಸಿ ತಟ್ಟಿದ್ದರೂ ಸಹ ಜಗತ್ತಿನಲ್ಲಿ ಭಾರತ ಇಂದು ಧೈರ್ಯ ಮತ್ತು ಸ್ಥಿರವಾಗಿ ಎದ್ದು ನಿಂತಿದೆ ಎಂದು ಎಕ್ಸಿಕ್ಯೂಟಿವ್ ವೈಸ್ ಚೇರ್ಮನ್, ಮೈ ಹೋಂ ಗ್ರೂಪ್ ರಾಮು ರಾವ್ ಜೂಪಲ್ಲಿ ಹೇಳಿದ್ದಾರೆ. ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಪ್ರಜಾಪ್ರಭುತ್ವ, ಜನಸಂಖ್ಯೆ ಮತ್ತು ವೈವಿಧ್ಯತೆಯ ಶಕ್ತಿಯನ್ನು ಹೊಂದಿದೆ. ಭಾರತವು ಶೀಘ್ರದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದ್ದು, ವಾರ್ಷಿಕವಾಗಿ ಶೇ. 7ರಷ್ಟು ಬೆಳವಣಿಗೆಯನ್ನು ಕಾಣುತ್ತಿದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us