Sign In

By signing in or creating an account, you agree with Associated Broadcasting Company's Terms & Conditions and Privacy Policy.

World Water Day: ನೀರು ಉಳಿಸುವ ಅಭಿಯಾನಕ್ಕಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಡಿಕೆ ಶಿವಕುಮಾರ್

World Water Day: ನೀರು ಉಳಿಸುವ ಅಭಿಯಾನಕ್ಕಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಡಿಕೆ ಶಿವಕುಮಾರ್

Ganapathi Sharma
|

Updated on: Mar 20, 2025 | 12:29 PM

ಕಾವೇರಿ ನೀರು ಉಳಿಸಲು, ಸರಿಯಾಗಿ ಬಳಸಲು ಅಭಿಯಾನ ನಡೆಸಲಾಗುತ್ತದೆ. ಆ ನಿಟ್ಟಿನಲ್ಲಿ ಕಾವೇರಿ ಪೂಜೆ ಮಾಡಬೇಕೆಂದು ಈಗಾಗಲೇ ಹೇಳಿದ್ದೆ. ಕೆಆರ್​ಎಸ್​ನಲ್ಲಿ ನಾನು ಈ ಬಗ್ಗೆ ಘೋಷಣೆ ಮಾಡಿದ್ದೆ. ಪ್ರಾಯೋಗಿಕವಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ನಡೆಯಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಒಂದು ತಿಂಗಳು ಅಭಿಯಾನ ಮಾಡ್ತೇವೆ ಎಂದು ಡಿಸಿಎಂ ತಿಳಿಸಿದ್ದಾರೆ.

ಬೆಂಗಳೂರು, ಮಾರ್ಚ್ 20: ವಿಶ್ವಜಲ ದಿನ (World Water Day) ಆಚರಣೆ ಅಂಗವಾಗಿ ಮತ್ತು ಕಾವೇರಿ ನೀರು ಉಳಿಸುವ ಅಭಿಯಾನಕ್ಕಾಗಿ ಶುಕ್ರವಾರ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ, ಪೂಜೆ ನೆರವೇರಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ವರ್ಷ 5ನೇ ಹಂತದ ಕಾವೇರಿ ಯೋಜನೆ ಪ್ರಾರಂಭಿಸಿದ್ದೇವೆ. ಬೆಂಗಳೂರಿಗೆ ನೀರು ಒದಗಿಸಲು ಎಲ್ಲಾ ವ್ಯವಸ್ಥೆ ಆಗಿದೆ. 6ನೇ ಹಂತಕ್ಕೂ ಡಿಪಿಆರ್ ರೆಡಿಯಾಗಿದೆ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ