ಹೊಸಕೋಟೆಯ ಶ್ರೀಗುರು ನಳಪಾಕ ಹೋಟೆಲ್​​ ಗೋಬಿಯಲ್ಲಿ ಹುಳ ಪತ್ತೆ: ಮುಂದೇನಾಯ್ತು ನೋಡಿ

ಹೊಸಕೋಟೆಯ ಶ್ರೀಗುರು ನಳಪಾಕ ಹೋಟೆಲ್​​ ಗೋಬಿಯಲ್ಲಿ ಹುಳ ಪತ್ತೆ: ಮುಂದೇನಾಯ್ತು ನೋಡಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jun 24, 2024 | 10:37 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕೆಇಬಿ ವೃತ್ತದ ಶ್ರೀಗುರು ನಳಪಾಕ ಹೋಟೆಲ್​ನಲ್ಲಿ ಖರೀದಿಸಿದ್ದ ಗೋಬಿ ಮಂಚೂರಿಯಲ್ಲಿ ಹುಳ ಪತ್ತೆ ಆಗಿರುವಂತಹ ಘಟನೆ ನಡೆದಿದೆ. 190 ರೂ. ಪಡೆದು ಹುಳವಿರುವ ಗೋಬಿ ಕೊಟ್ಟಿದ್ದೀರಾ ಅಂತ ಗ್ರಾಹಕ ಮಹಿಳೆ ಹೋಟೆಲ್​ನ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಬಿ ಮಂಚೂರಿಯಲ್ಲಿ ಹುಳವಿದ್ದ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಆಗಿದೆ.

ಬೆಂಗಳೂರು ಗ್ರಾಮಾಂತರ, ಜೂನ್​ 24: 190 ರೂ. ಹಣ ನೀಡಿ ಖರೀದಿಸಿದ ಗೋಬಿ ಮಂಚೂರಿಯಲ್ಲಿ (Gobi Manchurian) ಹುಳ ಪತ್ತೆಯಾಗಿದ್ದು, ಹುಳ (worm) ಕಂಡ ಗ್ರಾಹಕರು ಹೋಟೆಲ್ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕೆಇಬಿ ವೃತ್ತದ ಶ್ರೀಗುರು ನಳಪಾಕ ಹೋಟೆಲ್ ನಲ್ಲಿ ಘಟನೆ ನಡೆದಿದ್ದು ಮಹಿಳೆಯ ಕ್ಲಾಸ್ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಅಂದಹಾಗೆ ಇಂದು ಮಧ್ಯಾಹ್ನ ತೇಜಸ್ವಿನಿ ಅನ್ನೂ ಗ್ರಾಹಕರು ಕುಟುಂಬದ ಜೊತೆ ಹೋಟೆಲ್​ಗೆ ತೆರಳಿ ಗೋಬಿ ಮಂಚೂರಿ ಆರ್ಡರ್ ಮಾಡಿದ್ದಾರೆ. ಹೋಟೆಲ್ ಸಿಬ್ಬಂದಿ ಕೊಟ್ಟ ಗೋಬಿಯನ್ನ ಮಗುವಿಗೆ ತಿನ್ನಿಸಲು ಮುಂದಾಗಿದ್ದಾರೆ. ಈ ವೇಳೆ ಗೋಬಿ ಮಂಚೂರಿ ಒಳಗಡೆ ಹುಳವಿರುವುದು ಪತ್ತೆಯಾಗಿದ್ದು ಹೆಚ್ಚು ಹಣ ಪಡೆದು ಗುಣಮಟ್ಟದ ಗೋಬಿ ಮಂಚೂರಿ ಕೊಟ್ಟಿಲ್ಲ ಅಂತ ಆಕ್ರೋಶ ಹೊರ ಹಾಕಿದ್ದಾರೆ. ಜೊತೆಗೆ ಪುಟ್ ಪಾತ್​ನಲ್ಲಿ ಕಡಿಮೆ ಬೆಲೆಗೆ ಗೋಬಿ ಮಂಚೂರಿ ಸಿಕ್ಕಿದ್ರು ಹೆಚ್ಚು ಹಣ ಕೊಟ್ಟು ಸ್ವಚ್ಚವಾಗಿರುತ್ತೆ ಅಂತ ಖರೀದಿಸಿದರೆ ಇಲ್ಲು ಇದೇ ಪರಿಸ್ಥಿತಿಯಾದ್ರೆ ಹೇಗೆ ಅಂತ ಹೋಟೆಲ್ ಸಿಬ್ಬಂದಿಗೆ ಮಹಿಳೆ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ