ಯಾದಗಿರಿ ಸತತ ಮಳೆ: ನಿರ್ಮಾಣ ಹಂತದ ಸೇತುವೆ ಮೇಲಿಂದ ಏಣಿ ಮೂಲಕ ಶಾಲಾ ಮಕ್ಕಳ ಓಡಾಟ

ಯಾದಗಿರಿ ಸತತ ಮಳೆ: ನಿರ್ಮಾಣ ಹಂತದ ಸೇತುವೆ ಮೇಲಿಂದ ಏಣಿ ಮೂಲಕ ಶಾಲಾ ಮಕ್ಕಳ ಓಡಾಟ
| Updated By: ಸಾಧು ಶ್ರೀನಾಥ್​

Updated on: Sep 05, 2023 | 11:33 AM

ಮದರಕಲ್ ಹಾಗೂ ಕೊಳ್ಳೂರ ಎಂ ಮಧ್ಯೆ ಹಳ್ಳಕ್ಕೆ ಅಡ್ಡಲಾಗಿ ಇರುವ ಸೇತುವೆ ಇದಾಗಿದೆ. ಹಳ್ಳಕ್ಕೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಪಕ್ಕದಲ್ಲಿ ತಾತ್ಕಾಲಿಕ ರಸ್ತೆ ಮಾಡಲಾಗಿದೆ. ಆದ್ರೆ ಮಳೆಗೆ ರಸ್ತೆ ಕೊಚ್ಚಿ ಹೋಗಿದೆ. ರಸ್ತೆ ದಾಟಿ ಮದರಕಲ್ ಗ್ರಾಮದ ಮಕ್ಕಳಿಗೆ ಕೊಳ್ಳುರು ಶಾಲೆಗೆ ಹೋಗಲು ಆಗುತ್ತಿಲ್ಲ.

ಯಾದಗಿರಿ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಸತತ ಮಳೆ‌ಯಾಗುತ್ತಿದೆ (Yadagiri rains). ಈ ಹಿನ್ನೆಲೆ ಮಳೆ‌ ಹೊಡೆತಕ್ಕೆ‌ ಸಿಲುಕಿ ಶಾಲಾ ವಿದ್ಯಾರ್ಥಿಗಳು ತತ್ತರಿಸಿದ್ದಾರೆ. ನಿರ್ಮಾಣ ಹಂತದ ಸೇತುವೆ (Bridge) ಮೇಲಿಂದ ಏಣಿ ಮೂಲಕ ಮಕ್ಕಳು ( School Children) ಓಡಾಡುತ್ತಿದ್ದಾರೆ. ಏಣಿ (Ladder) ಮೂಲಕ ಪೋಷಕರು ತಮ್ಮ ಮಕ್ಕಳನ್ನ ಕೆಳಗಿಳಿಸಿ ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ಮದರಕಲ್ ಬಳಿ ಈ ಘಟನೆ ನಡೆದಿದೆ. ಮದರಕಲ್ ಹಾಗೂ ಕೊಳ್ಳೂರ ಎಂ ಮಧ್ಯೆ ಹಳ್ಳಕ್ಕೆ ಅಡ್ಡಲಾಗಿ ಇರುವ ಸೇತುವೆ ಇದಾಗಿದೆ.

ಹಳ್ಳಕ್ಕೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಸೇತುವೆ ‌‌ನಿರ್ಮಾಣ ಮಾಡುತ್ತಿರುವ ಹಿನ್ನೆಲೆ ಪಕ್ಕದಲ್ಲಿ ತಾತ್ಕಾಲಿಕ ರಸ್ತೆ ಮಾಡಲಾಗಿದೆ. ಆದ್ರೆ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರಸ್ತೆ ಕೊಚ್ಚಿಕೊಂಡು ಹೋಗಿದೆ. ಇದೆ ಕಾರಣಕ್ಕೆ ರಸ್ತೆ ದಾಟಿ ಮದರಕಲ್ ಗ್ರಾಮದ ಮಕ್ಕಳಿಗೆ ಕೊಳ್ಳುರು ಶಾಲೆಗೆ ಹೋಗಲು ಆಗುತ್ತಿಲ್ಲ. ಅನಿವಾರ್ಯವಾಗಿ ನಿರ್ಮಾಣ ಹಂತದ ಸೇತುವೆ ಮೇಲಿಂದ ಏಣಿ ಮೂಲಕ ಮಕ್ಕಳು ಹೋಗುತ್ತಿದ್ದಾರೆ. ಸ್ವಲ್ಪ ಆಯ ತಪ್ಪಿದ್ರೆ ಅನಾಹುತ‌ ಸಂಭವಿಸೋದು ಗ್ಯಾರಂಟಿ ಎನ್ನುವಂತಾಗಿದೆ. ಸೇತುವೆ ಕೆಲಸ‌ ವಿಳಂಬವಾಗಿರುವುದೇ ಈ ಸ್ಥಿತಿಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ