ಯಾದಗಿರಿ: ಬಿಜೆಪಿ ಮುಖಂಡನ ಸೋದರನ ರೈಸ್ ಮಿಲ್ನಲ್ಲಿ 700 ಕ್ವಿಂಟಾಲ್ ಅಕ್ಕಿ ಜಪ್ತಿ
ಚಿತ್ತಾಪುರ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ಗೆ ಸೇರಿದ ರೈಸ್ ಮಿಲ್ ನಲ್ಲಿ ಬರೋಬ್ಬರಿ 700 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಕಳೆದ 15 ದಿನಗಳಿಂದ ತಲೆ ಮರಿಸಿಕೊಂಡಿರುವ ರಾಜು ರಾಠೋಡ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಯಾದಗಿರಿ, ಡಿ.30: ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ಪಡಿತರ ಅಕ್ಕಿ (Ration Rice) ಕಳ್ಳತನ ಕೇಸ್ಗೆ ಟ್ವಿಸ್ಟ್ ಸಿಕ್ಕಿದೆ. ಚಿತ್ತಾಪುರ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಸಹೋದರ ರಾಜು ರಾಠೋಡ್ಗೆ ಸೇರಿದ ರೈಸ್ ಮಿಲ್ ನಲ್ಲಿ ಬರೋಬ್ಬರಿ 700 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ (Rice Seized). ಜಿಲ್ಲೆಯ ಗುರುಮಠಕಲ್ನಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ರೈಸ್ ಮಿಲ್ನಿಂದ ಅಕ್ಕಿ ಜಪ್ತಿ ಮಾಡಲಾಗಿದೆ. ಸುರಪುರ ಡಿವೈಎಸ್ಪಿ ಜಾವೇದ್ ಇನಾಮ್ದಾರ್ ನೇತೃತ್ವದಲ್ಲಿ ನಡೆದ ದಾಳಿ ವೇಳೆ ಪಾಲಿಶ್ ಮಾಡಿದ್ದ 630 ಕ್ವಿಂಟಾಲ್ ಪಡಿತರ ಅಕ್ಕಿ ಸೇರಿ 700 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ.
630 ಕ್ವಿಂಟಾಲ್ ಪಾಲಿಶ್ ಮಾಡಿರೋ ಪಡಿತರ ಅಕ್ಕಿಯ ಜೊತೆಗೆ ಪಾಲಿಶ್ ಮಾಡಲು ರೆಡಿ ಮಾಡಿಟ್ಟುಕೊಂಡಿದ್ದ 70 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಸದ್ಯ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳು ರಾಜು ರಾಠೋಡ್ ಗೆ ಅಕ್ಕಿ ಮಾರಾಟ ಮಾಡಿರೋದಾಗಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಕಳೆದ 15 ದಿನಗಳಿಂದ ತಲೆ ಮರಿಸಿಕೊಂಡಿರುವ ರಾಜು ರಾಠೋಡ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
ಹಬ್ಬಳ್ಳಿ ಲವ್ ಜಿಹಾದ್ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಗರಂ!
