ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಧರೆಗುರುಳಿದ ಶತಮಾನದ ಮರ

Updated on: Jun 07, 2023 | 8:10 PM

ಯಾದಗಿರಿ ಜಿಲ್ಲೆಯ ಸುರಪುರ, ಹುಣಸಗಿ, ಶಹಾಪುರ ಸೇರಿದಂತೆ ಹಲವೆಡೆ ಜೋರು ಮಳೆ ಸುರಿದಿದೆ. ಬಿರುಗಾಳಿ ಸಹಿತ ಭಾರೀ ಮಳೆಗೆ ಶತಮಾನದ ಮರ ಒಂದು ಧರೆಗುರುಳಿದೆ.

ಯಾದಗಿರಿ: ಜಿಲ್ಲೆಯ ಸುರಪುರ, ಹುಣಸಗಿ, ಶಹಾಪುರ ಸೇರಿದಂತೆ ಹಲವೆಡೆ ಜೋರು ಮಳೆ ಸುರಿದಿದೆ.  ಬಿರುಗಾಳಿ ಸಹಿತ ಭಾರೀ ಮಳೆ (heavy rain)ಗೆ ಶತಮಾನದ ಮರ ಒಂದು ಧರೆಗುರುಳಿದೆ. ಮರ ಬಿದ್ದಿದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದ ಆಟೋ, ಬೈಕ್​ಗಳು ಜಖಂ ಗೊಂಡಿವೆ. ಅದೇ ರೀತಿಯಾಗಿ ಮನೆಗಳ ಮೇಲಿನ ಪತ್ರಾಸ್​ಗಳು ಹಾರಿ ಹೋಗಿವೆ. ಬಿರುಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಆಗಿದೆ ಎನ್ನುವುದು ಒಂದು ಕಡೆ ಆದರೆ, ಉತ್ತಮ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೃಷಿ ಚಟುವಟಿಕೆಗಳು ಬಿರುಸುಗೊಳ್ಳವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More