ಯಾದಗಿರಿ: ದಾರಿಯಲ್ಲಿ ಸಿಕ್ಕ 1.45 ಲಕ್ಷ ರೂ. ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಸುರಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ದಯಾನಂದ ಅವರು ದಾರಿಯಲ್ಲಿ ಸಿಕ್ಕಿದ್ದ ಹಣವನ್ನು ರೈತ ಗಾದಪ್ಪ ಅವರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ನಡೆದ ಈ ಘಟನೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಹತ್ತಿ ಬೆಳೆ ಮಾರಿ ಮನೆಗೆ ಹೋಗುವಾಗ ರೈತ ಗೌಡಪ್ಪ ಪಾಟೀಲ್ ರಸ್ತೆಯಲ್ಲಿ 1 ಲಕ್ಷದ 47 ಸಾವಿರ ರೂ. ಹಣವನ್ನು ಕಳೆದುಕೊಂಡಿದ್ದರು.
ಯಾದಗಿರಿ, ನವೆಂಬರ್ 13: ದಾರಿಯಲ್ಲಿ ಸಿಕ್ಕ ಹಣವನ್ನು ವಾರಸುದಾರರಿಗೆ ಮರಳಿಸಿ ಪೊಲೀಸ್ ಕಾನ್ಸ್ಟೇಬಲ್ ಪ್ರಾಮಾಣಿಕತೆ ಮೆರೆದ ಪ್ರಸಂಗ ಯಾದಗಿರಿ ಜಿಲ್ಲೆಯ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹತ್ತಿ ಬೆಳೆ ಮಾರಿ ಮನೆಗೆ ಹೋಗುವಾಗ ರೈತ ಗೌಡಪ್ಪ ಪಾಟೀಲ್ ರಸ್ತೆಯಲ್ಲಿ 1 ಲಕ್ಷದ 47 ಸಾವಿರ ರೂ. ಹಣವನ್ನು ಕಳೆದುಕೊಂಡಿದ್ದರು. ಅದೇ ದಾರಿಯಲ್ಲಿ ಆಗಮಿಸಿದ ಸುರಪುರ ಪೋಲಿಸ್ ಠಾಣೆಯ ಕಾನ್ಸ್ಟೇಬಲ್ ದಯಾನಂದ ಜಮಾದರ್ ಅವರಿಗೆ ಆ ಹಣ ಸಿಕ್ಕಿದ್ದು, ಠಾಣೆ ಪಿಐ ಉಮೇಶ್ ನಾಯಕ ನೇತೃತ್ವದಲ್ಲಿ ರೈತ ಗೌಡಪ್ಪಗೆ ಹಣ ವಾಪಸ್ ಮಾಡಿದ್ದಾರೆ. ಸುರಪುರ ಪೋಲಿಸರ ಕಾರ್ಯಕ್ಕೆ ರೈತ ಗೌಡಪ್ಪ ಮತ್ತು ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 13, 2025 10:30 AM
Follow Us
Latest Videos
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
