ಉಕ್ಕಿ ಹರಿದ ಭೀಮೆ: ಯಾದಗಿರಿ ತುಂಬೆಲ್ಲ ನೀರೇ ನೀರು
ಮಹಾರಾಷ್ಟ್ರದಿಂದ ಭೀಮಾ ನದಿಗೆ 5 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟಿರುವ ಕಾರಣ ಭೀಮಾ ನದಿ ಉಕ್ಕಿಹರಿದು ಯಾದಗಿರಿ ನಗರದ ವಿವಿಧ ಭಾಗಗಳಿಗೆ ಪ್ರವಾಹದ ನೀರು ನುಗ್ಗಿದೆ. ನದಿ ತೀರದಿಂದ 1.5 ಕಿಲೋ ಮೀಟರ್ ದೂರದ ವರೆಗೂ ನೀರು ವ್ಯಾಪಿಸಿದ್ದು, ಮನೆಗಳಿಗೆ ಜಲ ದಿಗ್ಬಂಧನ ಉಂಟಾಗಿದೆ. ದಿನ ಬಳಕೆ ವಸ್ತುಗಳು, ದವಸ ಧಾನ್ಯಗಳು ನೀರಲ್ಲಿ ಕೊಚ್ಚಿ ಹೋಗಿವೆ.
ಯಾದಗಿರಿ, ಸೆಪ್ಟೆಂಬರ್ 29: ಭೀಮಾ ನದಿ ಉಕ್ಕಿಹರಿದ ಪರಿಣಾಮ ಯಾದಗಿರಿ (Yadgir) ನಗರದ ಗ್ರೀನ್ ಸಿಟಿ ಬಡಾವಣೆ ಸಂಪೂರ್ಣ ಜಲಾವೃತಗೊಂಡಿದೆ. ಜನರು ಮನೆಯಿಂದ ಹೊರಗೆ ಬರಲೂ ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ರಸ್ತೆಗಳ ಮೇಲೆಯೇ ಮೂರ್ನಾಲ್ಕು ಅಡಿಯಷ್ಟು ನೀರು ಆವರಿಸಿಕೊಂಡಿದೆ. ಖಾಸಗಿ ಶಾಲೆ, ಬಿಜೆಪಿ ಜಿಲ್ಲಾ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕಚೇರಿ ಸೇರಿದಂತೆ ಹತ್ತಾರು ಮನೆಗಳಿಗೆ ಪ್ರವಾಹದ ನೀರು ನುಗ್ಗಿ ಸಮಸ್ಯೆಯಾಗಿದೆ. ಮನೆಯಲ್ಲಿನ ದಿನ ಬಳಕೆ ವಸ್ತುಗಳು, ದವಸ ಧಾನ್ಯಗಳು ನೀರಲ್ಲಿ ಕೊಚ್ಚಿ ಹೋಗಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
