ಉಕ್ಕಿ ಹರಿದ ಭೀಮೆ: ಯಾದಗಿರಿ ತುಂಬೆಲ್ಲ ನೀರೇ ನೀರು

Edited By:

Updated on: Sep 29, 2025 | 10:35 AM

ಮಹಾರಾಷ್ಟ್ರದಿಂದ ಭೀಮಾ ನದಿಗೆ 5 ಲಕ್ಷ ಕ್ಯೂಸೆಕ್​ ನೀರು ಹರಿಬಿಟ್ಟಿರುವ ಕಾರಣ ಭೀಮಾ ನದಿ ಉಕ್ಕಿಹರಿದು ಯಾದಗಿರಿ ನಗರದ ವಿವಿಧ ಭಾಗಗಳಿಗೆ ಪ್ರವಾಹದ ನೀರು ನುಗ್ಗಿದೆ. ನದಿ ತೀರದಿಂದ 1.5 ಕಿಲೋ ಮೀಟರ್​ ದೂರದ ವರೆಗೂ ನೀರು ವ್ಯಾಪಿಸಿದ್ದು, ಮನೆಗಳಿಗೆ ಜಲ ದಿಗ್ಬಂಧನ ಉಂಟಾಗಿದೆ. ದಿನ ಬಳಕೆ ವಸ್ತುಗಳು, ದವಸ ಧಾನ್ಯಗಳು ನೀರಲ್ಲಿ ಕೊಚ್ಚಿ ಹೋಗಿವೆ.

ಯಾದಗಿರಿ, ಸೆಪ್ಟೆಂಬರ್​ 29: ಭೀಮಾ ನದಿ ಉಕ್ಕಿಹರಿದ ಪರಿಣಾಮ ಯಾದಗಿರಿ (Yadgir) ನಗರದ ಗ್ರೀನ್​ ಸಿಟಿ ಬಡಾವಣೆ ಸಂಪೂರ್ಣ ಜಲಾವೃತಗೊಂಡಿದೆ. ಜನರು ಮನೆಯಿಂದ ಹೊರಗೆ ಬರಲೂ ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ರಸ್ತೆಗಳ ಮೇಲೆಯೇ ಮೂರ್ನಾಲ್ಕು ಅಡಿಯಷ್ಟು ನೀರು ಆವರಿಸಿಕೊಂಡಿದೆ. ಖಾಸಗಿ ಶಾಲೆ, ಬಿಜೆಪಿ ಜಿಲ್ಲಾ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕಚೇರಿ ಸೇರಿದಂತೆ ಹತ್ತಾರು ಮನೆಗಳಿಗೆ ಪ್ರವಾಹದ ನೀರು ನುಗ್ಗಿ ಸಮಸ್ಯೆಯಾಗಿದೆ. ಮನೆಯಲ್ಲಿನ ದಿನ ಬಳಕೆ ವಸ್ತುಗಳು, ದವಸ ಧಾನ್ಯಗಳು ನೀರಲ್ಲಿ ಕೊಚ್ಚಿ ಹೋಗಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More