AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಳಿಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ: ಬಾಣಂತಿ, ಮಗು ಅದೃಷ್ಟವಶಾತ್ ಪಾರು

ಗಾಳಿಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ: ಬಾಣಂತಿ, ಮಗು ಅದೃಷ್ಟವಶಾತ್ ಪಾರು

ಅಮೀನ್​ ಸಾಬ್​
| Edited By: |

Updated on: May 24, 2026 | 12:55 PM

Share

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಗರಿಹಾಳ ಗ್ರಾಮದಲ್ಲಿ ಗಾಳಿ ಸಹಿತ ಭಾರಿ ಮಳೆಗೆ ಮನೆಯ ಶೀಟ್‌ಗಳು ಹಾರಿಹೋಗಿವೆ. ರಾತ್ರಿ ಮಗುವನ್ನು ಮಡಿಲಲ್ಲಿ ಇಟ್ಟುಕೊಂಡು ಮಲಗಿದ್ದ ಬಾಣಂತಿ ಮತ್ತು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಟುಂಬವು ತಾತ್ಕಾಲಿಕವಾಗಿ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದು, ಈ ಘಟನೆಯು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಯಾದಗಿರಿ, ಮೇ 24: ಜಿಲ್ಲೆಯಲ್ಲಿ ಸುರಿದ ಭಾರಿ ಗಾಳಿ ಸಹಿತ ಮಳೆಯು ಅಪಾರ ಅವಾಂತರ ಸೃಷ್ಟಿಸಿದೆ. ಸುರಪುರ ತಾಲೂಕಿನ ಚಿಗರಿಹಾಳ ಗ್ರಾಮದಲ್ಲಿ ಭಾರಿ ಮಳೆಯೊಂದಿಗೆ ಬೀಸಿದ ಬಿರುಗಾಳಿಗೆ ಮನೆಯೊಂದರ ಶೀಟ್‌ಗಳು ಹಾರಿಹೋಗಿ ಅಪಾರ ನಷ್ಟ ಸಂಭವಿಸಿದೆ. ಮನೆಯ ಮೇಲ್ಛಾವಣಿಯ ಟಿನ್ ಶೀಟ್‌ಗಳು ಕಿತ್ತುಬಂದಿದ್ದು, ಕಲ್ಲುಗಳು ಬಿದ್ದಿವೆ. ಘಟನೆ ವೇಳೆ ಮನೆಯಲ್ಲಿ ಮಗುವನ್ನು ಮಡಿಲಲ್ಲಿ ಇಟ್ಟುಕೊಂಡು ಮಲಗಿದ್ದ ಬಾಣಂತಿ ಮತ್ತು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಂತರ, ತಾಯಿ ಮತ್ತು ಮಗುವನ್ನು ತಕ್ಷಣವೇ ಹತ್ತಿರದ ದೇವಸ್ಥಾನಕ್ಕೆ ಕರೆದೊಯ್ದು ಆಶ್ರಯ ನೀಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More