ಗಾಳಿಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ: ಬಾಣಂತಿ, ಮಗು ಅದೃಷ್ಟವಶಾತ್ ಪಾರು

Edited By:

Updated on: May 24, 2026 | 12:55 PM

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಗರಿಹಾಳ ಗ್ರಾಮದಲ್ಲಿ ಗಾಳಿ ಸಹಿತ ಭಾರಿ ಮಳೆಗೆ ಮನೆಯ ಶೀಟ್‌ಗಳು ಹಾರಿಹೋಗಿವೆ. ರಾತ್ರಿ ಮಗುವನ್ನು ಮಡಿಲಲ್ಲಿ ಇಟ್ಟುಕೊಂಡು ಮಲಗಿದ್ದ ಬಾಣಂತಿ ಮತ್ತು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಟುಂಬವು ತಾತ್ಕಾಲಿಕವಾಗಿ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದು, ಈ ಘಟನೆಯು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಯಾದಗಿರಿ, ಮೇ 24: ಜಿಲ್ಲೆಯಲ್ಲಿ ಸುರಿದ ಭಾರಿ ಗಾಳಿ ಸಹಿತ ಮಳೆಯು ಅಪಾರ ಅವಾಂತರ ಸೃಷ್ಟಿಸಿದೆ. ಸುರಪುರ ತಾಲೂಕಿನ ಚಿಗರಿಹಾಳ ಗ್ರಾಮದಲ್ಲಿ ಭಾರಿ ಮಳೆಯೊಂದಿಗೆ ಬೀಸಿದ ಬಿರುಗಾಳಿಗೆ ಮನೆಯೊಂದರ ಶೀಟ್‌ಗಳು ಹಾರಿಹೋಗಿ ಅಪಾರ ನಷ್ಟ ಸಂಭವಿಸಿದೆ. ಮನೆಯ ಮೇಲ್ಛಾವಣಿಯ ಟಿನ್ ಶೀಟ್‌ಗಳು ಕಿತ್ತುಬಂದಿದ್ದು, ಕಲ್ಲುಗಳು ಬಿದ್ದಿವೆ. ಘಟನೆ ವೇಳೆ ಮನೆಯಲ್ಲಿ ಮಗುವನ್ನು ಮಡಿಲಲ್ಲಿ ಇಟ್ಟುಕೊಂಡು ಮಲಗಿದ್ದ ಬಾಣಂತಿ ಮತ್ತು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಂತರ, ತಾಯಿ ಮತ್ತು ಮಗುವನ್ನು ತಕ್ಷಣವೇ ಹತ್ತಿರದ ದೇವಸ್ಥಾನಕ್ಕೆ ಕರೆದೊಯ್ದು ಆಶ್ರಯ ನೀಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us