Mysuru: ಮೋದಿ ಸಮಾವೇಶ ನಡೆದ ಮೈದಾನದಲ್ಲಿ ಕಸ ಹೆಕ್ಕಿದ ಯದುವೀರ್ ದಂಪತಿ, ವಿಡಿಯೋ ನೋಡಿ

Edited By:

Updated on: Apr 15, 2024 | 2:59 PM

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಸಮಾವೇಶ ನಡೆದ ಮಹಾರಾಜ ಕಾಲೇಜು ಮೈದಾನದಲ್ಲಿ ಪಕ್ಷದ ಅಭ್ಯರ್ಥಿ ಯದುವೀರ್ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಸಿಂಗ್ ದಂಪತಿ ಕಸ ಹೆಕ್ಕಿ ಸ್ವಚ್ಛಗೊಳಿಸಿದರು. ಆ ಮೂಲಕ ತಾವೂ ಸಹ ಸಾಮಾನ್ಯರಂತೆಯೇ ಎಂದು ಬಿಂಬಿಸಲು ಯತ್ನಿಸಿದರು. ಯದುವೀರ್ ದಂಪತಿ ಕಸ ಹೆಕ್ಕುತ್ತಿರುವ ವಿಡಿಯೋ ಇಲ್ಲಿದೆ.

ಮೈಸೂರು, ಏಪ್ರಿಲ್ 15: ಲೋಕಸಭೆ ಚುನಾವಣೆ (Lok Sabha Elections) ಪ್ರಚಾರಕ್ಕಾಗಿ ಭಾನುವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ (BJP) ನಡೆಸಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ ಭಾಷಣ ಮಾಡಿದ್ದರು. ಮೈಸೂರು ಕೊಡಗು ಕ್ಷೇತ್ರದ ಪಕ್ಷದ ಅಭ್ಯರ್ಥಿ ಯದುವೀರ್ ಒಡೆಯರ್ (Yaduveer Krishnadatta Chamaraja Wadiyar) ಪರ ಮತಯಾಚನೆ ಮಾಡಿದ್ದರು. ಸಮಾವೇಶಕ್ಕೆ ಸಾವಿರಾರು ಹಾಜರಾಗಿದ್ದರು. ಸಮಾವೇಶದ ನಂತರ ಆ ಜಾಗದಲ್ಲಿ ಕಸ ಹೆಕ್ಕುವ ಮೂಲಕ ಯದುವೀರ್ ದಂಪತಿ ಗಮನ ಸೆಳೆದಿದ್ದಾರೆ.

ಮಹಾರಾಜ ಕಾಲೇಜು ಮೈದಾನದಲ್ಲಿ ಇತರ ಕಾರ್ಯಕರ್ತರ ಜತೆ ಸಾಮಾನ್ಯರಲ್ಲಿ ಸಾಮಾನ್ಯರಂತೆಯೇ ಯದುವೀರ್ ಹಾಗೂ ತ್ರಿಷಿಕಾ ಕುಮಾರಿ ಸಿಂಗ್ ದಂಪತಿ ಶುಚಿತ್ವ ಕಾರ್ಯದಲ್ಲಿ ಭಾಗಿಯಾದರು. ಈ ಮೂಲಕ ‘ನಾನು ಮಹಾರಾಜ ಅಲ್ಲ, ಸಾಮನ್ಯ ಪ್ರಜೆ’ ಎಂದು ಸಾಬೀತುಪಡಿಸಲು ಯದುವೀರ್ ಮುಂದಾದಂತೆ ಕಂಡಿತು.

ಇದನ್ನೂ ಓದಿ: ಬಿಜೆಪಿಗಿಂತ ಜೆಡಿಎಸ್ ನಾಯಕರಿಗೇ ಹೆಚ್ಚು ಆದ್ಯತೆ ನೀಡಿದರೇ ಪ್ರಧಾನಿ ಮೋದಿ? ಅನುಮಾನ ಹೆಚ್ಚಿಸಿದ ಮೈಸೂರಿನ ವೇದಿಕೆ!

ಭಾನುವಾರ ಮಹಾರಾಜ ಕಾಲೇಜಯ ಮೈದಾನದಲ್ಲಿ ನಡೆದಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ 60 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಯದುವೀರ್ ಪರವಾಗಿ ಪ್ರಧಾನಿ ಮೋದಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರು ಮತಯಾಚನೆ ಮಾಡಿದ್ದರು. ಅಲ್ಲದೆ, ರಾಜ್ಯ ಇತರ ಕ್ಷೇತ್ರಗಳ ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆಯೂ ಮತದಾರರಿಗೆ ಮನವಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More