ಚಾಮುಂಡಿ ಬೆಟ್ಟದಲ್ಲಿ ನಡೆದ ಮಹಾರಥೋತ್ಸವದಲ್ಲಿ ಯದುವೀರ್ ಕುಟುಂಬ ಭಾಗಿ, ರಾಜ್ಯದ ಸುಭಿಕ್ಷೆಗಾಗಿ ಪ್ರಾರ್ಥನೆ

ಅರುಣ್​ ಕುಮಾರ್​ ಬೆಳ್ಳಿ

Updated on: Oct 26, 2023 | 12:51 PM

ಮಹಾರಥೋತ್ಸವದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಯದುವೀರ್, ಕಾರ್ಯಕ್ರಮಗಳೆಲ್ಲ ಒಂದೊಂದಾಗಿ ನೆರವೇರುತ್ತಿವೆ, ಅಮ್ಮನವರ ದರ್ಶನಕ್ಕಾಗಿ ಏರ್ಪಾಟು ಮಾಡಲಾಗಿದೆ. ರಾಜ್ಯ ಮತ್ತು ದೇಶದ ಸುಭಿಕ್ಷೆ, ಉತ್ತಮ ಮಳೆ ಬೆಳೆ ಹಾಗೂ ಅಭಿವೃದ್ಧಿಗಾಗಿ ಅಮ್ಮನವರನ್ನು ಬೇಡಿಕೊಂಡಿದ್ದೇನೆ ಎಂದು ಹೇಳಿದರು.

ಮೈಸೂರು: ನಾಡದೇವತೆ ಚಾಮುಂಡೇಶ್ವರಿ (goddess Chamundeshwari) ಸಮ್ಮುಖದಲ್ಲಿ ನಗರದಲ್ಲಿ ನಡೆದ ನಾಡಹಬ್ಬ ದಸರಾ ಮಹೋತ್ಸವ ನಡೆದ ಬಳಿಕ ಸಂಪ್ರದಾಯದಂತೆ ಇಂದು ಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ಮಹಾರಥೋತ್ಸವ (Maharahtotsava) ನಡೆಯಿತು. ಕಾರ್ಯಕ್ರಮದಲ್ಲಿ ಹಿಂದಿನ ಒಡೆಯರ್ ಅರಸೊತ್ತಿಗೆಯ ವಂಶಸ್ಥರಾದ ರಾಜಮಾತೆ ಪ್ರಮೋದಾ ದೇವಿ (Rajamatha Pramoda Devi), ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wodeyar), ಅವರ ಧರ್ಮಪತ್ನಿ ತ್ರಿಷಿಕಾ ದೇವಿ ಯದುವೀರ್ ಮತ್ತು ಇವರಿಬ್ಬರ ಪುತ್ರ ಆದ್ಯವೀರ್ ಪಾಲ್ಗೊಂಡರು. ಮಹಾರಥೋತ್ಸವದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಯದುವೀರ್, ಕಾರ್ಯಕ್ರಮಗಳೆಲ್ಲ ಒಂದೊಂದಾಗಿ ನೆರವೇರುತ್ತಿವೆ, ಅಮ್ಮನವರ ದರ್ಶನಕ್ಕಾಗಿ ಏರ್ಪಾಟು ಮಾಡಲಾಗಿದೆ. ರಾಜ್ಯ ಮತ್ತು ದೇಶದ ಸುಭಿಕ್ಷೆ, ಉತ್ತಮ ಮಳೆ ಬೆಳೆ ಹಾಗೂ ಅಭಿವೃದ್ಧಿಗಾಗಿ ಅಮ್ಮನವರನ್ನು ಬೇಡಿಕೊಂಡಿದ್ದೇನೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 26, 2023 12:20 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.