‘ಚೌಕಿ’ ಹೇಳಿಕೆ ವಿವಾದ: ಸ್ಪಷ್ಟನೆ ಕೊಟ್ಟ ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ

Edited By:

Updated on: Oct 12, 2025 | 4:11 PM

ತಮ್ಮ ತಂದೆ ಕೊಂಡದಕುಳಿ ರಾಮಚಂದ್ರ ಹೆಗಡೆ ಅವರ ಪುಸ್ತಕ ಬಿಡುಗಡೆ ಸಂದರ್ಭ ಯಕ್ಷಗಾನ ಕಲಾವಿದೆ ಅಶ್ವಿನಿ ಕೊಂಡದಕುಳಿ ಆಡಿದ್ದ ಕೆಲ ಮಾತುಗಳು ವಿವಾದ ಸೃಷ್ಟಿಸಿದ್ದವು. ಈ ಬಗ್ಗೆ Tv9 ಜೊತೆ ಮಾತನಾಡಿರುವ ಅಶ್ವಿನಿ, ತಮ್ಮ ಹೇಳಿಕೆಗೆ ಸ್ಪಷ್ಟನೆ ಕೊಟ್ಟಿದ್ದಾರೆ. ತಾವು ಆಡಿರುವ ಮಾತಿನ ಹಿಂದಿದ್ದ ಉದ್ದೇಶ ಏನಾಗಿತ್ತು ಎಂಬುದನ್ನ ವಿವರಿಸಿದ್ದಾರೆ.

ಉಡುಪಿ, ಅಕ್ಟೋಬರ್​ 12: ಕೊಂಡದಕುಳಿ ರಾಮಚಂದ್ರ ಹೆಗಡೆ ಅವರ ‘ಯಕ್ಷಚಂದ್ರ ಪುಸ್ತಕ’ ಬಿಡುಗಡೆ ಸಂದರ್ಭ ಯಕ್ಷಗಾನ ಕಲಾವಿದೆ, ಉಪನ್ಯಾಸಕಿ ಅಶ್ವಿನಿ ಕೊಂಡದಕುಳಿ ಆಡಿದ್ದ ಕೆಲ ಮಾತುಗಳು ಭಾರಿ ವಿವಾದಕ್ಕೆ ಕಾರಣವಾಗಿದ್ದವು. ಯಕ್ಷಗಾನದ (Yakshagana) ಚೌಕಿಯಲ್ಲಿ ಮಹಿಳಾ ಕಲಾವಿದರನ್ನ ಹೇಗೆ ನೋಡಲಾಗುತ್ತೆ ಎಂಬ ಬಗ್ಗೆ ಅವರಾಡಿದ್ದ ಮಾತುಗಳು ಪುರುಷ ಕಲಾವಿದರ ಆಕ್ರೋಶಕ್ಕೆ ಕಾರಣವಾಗಿತ್ತು. ಆ ಬೆನ್ನಲ್ಲೇ ಅಶ್ವಿನಿ ಅವರ ಜೊತೆ ವೇದಿಕೆ ಹಂಚಿಕೊಳ್ಳಲ್ಲ ಎಂದೂ ಕೆಲವರು ಘೋಷಿಸಿದ್ದರು. ಈ ಎಲ್ಲ ವಿವಾದಗಳ ಬಗ್ಗೆ Tv9 ಜೊತೆ ಸ್ವತಃ ಅಶ್ವಿನಿ ಕೊಂಡದಕುಳಿ ಅವರೇ ಮಾತನಾಡಿದ್ದು, ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ತನ್ನ ತಂದೆಯ ಉತ್ತಮ ಗುಣಗಳನ್ನು ಹೊಗಳುವುದು ತಪ್ಪೇ? ಹೆಣ್ಣು ಮಗಳಿಗೆ ಇಷ್ಟು ಸ್ವಾತಂತ್ರ್ಯವಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More