AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ಬೆಂಕಿ ಹಚ್ಚಿದ ವ್ಯಕ್ತಿ; ಇಲ್ಲಿದೆ ವಿಡಿಯೋ

ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ಬೆಂಕಿ ಹಚ್ಚಿದ ವ್ಯಕ್ತಿ; ಇಲ್ಲಿದೆ ವಿಡಿಯೋ

ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 28, 2024 | 6:02 PM

Share

ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ಯಲಹಂಕದ(Yalahanka) ಶಿವಕೋಟೆ ಬಳಿ ನಡೆದಿದೆ. ಒತ್ತುವರಿ ಸಂಬಂಧಿಸಿದಂತೆ ಯಲಹಂಕ ತಹಶೀಲ್ದಾರ್​ಗೆ ಸ್ಥಳೀಯರು ದೂರು ನೀಡಿದ್ದರು. ಈ ಹಿನ್ನಲೆ ಒತ್ತುವರಿ ತೆರವು ಮಾಡಲು ತಹಶೀಲ್ದಾರ್ ಅಧಿಕಾರಿಗಳನ್ನು ಕಳುಹಿಸಿದ್ದರು.

ಬೆಂಗಳೂರು, ಫೆ.28: ಜಿಲ್ಲೆಯ ಯಲಹಂಕದ(Yalahanka) ಶಿವಕೋಟೆ ಬಳಿ ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಒತ್ತುವರಿ ಮಾಡಿದ ಆರೋಪ ಹಿನ್ನಲೆ ಒತ್ತುವರಿಯನ್ನು ತೆರವು ಮಾಡಲು ಯಲಹಂಕ ತಹಶೀಲ್ದಾರ್​ ಕಳುಹಿಸಿದ್ದರು. ಈ ವೇಳೆ ಅದೇ ಗ್ರಾಮದ ಬಚ್ಚೇಗೌಡ ಎಂಬಾತ ಜೆಸಿಬಿಗೆ ಬೆಂಕಿ ಹಚ್ಚಿದ್ದಾನೆ. ಒತ್ತುವರಿ ಸಂಬಂಧಿಸಿದಂತೆ ಯಲಹಂಕ ತಹಶೀಲ್ದಾರ್​ಗೆ ಸ್ಥಳೀಯರು ದೂರು ನೀಡಿದ್ದರು. ಈ ಹಿನ್ನಲೆ ಒತ್ತುವರಿ ತೆರವು ಮಾಡಲು ತಹಶೀಲ್ದಾರ್ ಅಧಿಕಾರಿಗಳನ್ನು ಕಳುಹಿಸಿದ್ದರು. ಈ ವೇಳೆ ಗ್ರಾಮದ ಬಚ್ಚೇಗೌಡ ಹಾಗೂ ಪುತ್ರ ಚೇತನ್​ ಗಲಾಟೆ ಮಾಡಿದ್ದಾರೆ. ಅಲ್ಲದೇ ತೆರವು ವೇಳೆ ಬಾಟಲ್​ಗೆ ಪೆಟ್ರೋಲ್ ತುಂಬಿ ಜೆಸಿಬಿಗೆ ಬೆಂಕಿ ಹಾಕಿದ್ದಾರೆ.  ಜೆಸಿಬಿ ಚಾಲಕ ಹಾಗೂ ಕಂದಾಯ ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಬಚ್ಚೇಗೌಡನನ್ನು ರಾಜಾನುಕುಂಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Feb 28, 2024 06:00 PM

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More