ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ಬೆಂಕಿ ಹಚ್ಚಿದ ವ್ಯಕ್ತಿ; ಇಲ್ಲಿದೆ ವಿಡಿಯೋ
ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ಯಲಹಂಕದ(Yalahanka) ಶಿವಕೋಟೆ ಬಳಿ ನಡೆದಿದೆ. ಒತ್ತುವರಿ ಸಂಬಂಧಿಸಿದಂತೆ ಯಲಹಂಕ ತಹಶೀಲ್ದಾರ್ಗೆ ಸ್ಥಳೀಯರು ದೂರು ನೀಡಿದ್ದರು. ಈ ಹಿನ್ನಲೆ ಒತ್ತುವರಿ ತೆರವು ಮಾಡಲು ತಹಶೀಲ್ದಾರ್ ಅಧಿಕಾರಿಗಳನ್ನು ಕಳುಹಿಸಿದ್ದರು.
ಬೆಂಗಳೂರು, ಫೆ.28: ಜಿಲ್ಲೆಯ ಯಲಹಂಕದ(Yalahanka) ಶಿವಕೋಟೆ ಬಳಿ ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಒತ್ತುವರಿ ಮಾಡಿದ ಆರೋಪ ಹಿನ್ನಲೆ ಒತ್ತುವರಿಯನ್ನು ತೆರವು ಮಾಡಲು ಯಲಹಂಕ ತಹಶೀಲ್ದಾರ್ ಕಳುಹಿಸಿದ್ದರು. ಈ ವೇಳೆ ಅದೇ ಗ್ರಾಮದ ಬಚ್ಚೇಗೌಡ ಎಂಬಾತ ಜೆಸಿಬಿಗೆ ಬೆಂಕಿ ಹಚ್ಚಿದ್ದಾನೆ. ಒತ್ತುವರಿ ಸಂಬಂಧಿಸಿದಂತೆ ಯಲಹಂಕ ತಹಶೀಲ್ದಾರ್ಗೆ ಸ್ಥಳೀಯರು ದೂರು ನೀಡಿದ್ದರು. ಈ ಹಿನ್ನಲೆ ಒತ್ತುವರಿ ತೆರವು ಮಾಡಲು ತಹಶೀಲ್ದಾರ್ ಅಧಿಕಾರಿಗಳನ್ನು ಕಳುಹಿಸಿದ್ದರು. ಈ ವೇಳೆ ಗ್ರಾಮದ ಬಚ್ಚೇಗೌಡ ಹಾಗೂ ಪುತ್ರ ಚೇತನ್ ಗಲಾಟೆ ಮಾಡಿದ್ದಾರೆ. ಅಲ್ಲದೇ ತೆರವು ವೇಳೆ ಬಾಟಲ್ಗೆ ಪೆಟ್ರೋಲ್ ತುಂಬಿ ಜೆಸಿಬಿಗೆ ಬೆಂಕಿ ಹಾಕಿದ್ದಾರೆ. ಜೆಸಿಬಿ ಚಾಲಕ ಹಾಗೂ ಕಂದಾಯ ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಬಚ್ಚೇಗೌಡನನ್ನು ರಾಜಾನುಕುಂಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Feb 28, 2024 06:00 PM
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
