ಅಭಿಮಾನಿಗಳ ನಿಧನ ನೋವಿನಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಟ ಯಶ್​

|

Updated on: Jan 08, 2024 | 5:36 PM

ಮೃತ ಅಭಿಮಾನಿಗಳಾದ ಹನುಮಂತ ಹರಿಜನ, ಮುರಳಿ ನಡವಿನಮನಿ ಹಾಗೂ ನವೀನ್ ಅವರ ಕುಟುಂಬದವರನ್ನು ಭೇಟಿ ಮಾಡಲು ಸೊರಣಗಿ ಗ್ರಾಮಕ್ಕೆ ಯಶ್​ ತೆರಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಿದ ಅವರನ್ನು ನೋಡಲು ಜನರು ಮುಗಿಬಿದ್ದಿದ್ದಾರೆ.

ನಟ ಯಶ್​ ಅವರಿಗೆ ಹುಟ್ಟುಹಬ್ಬದ ದಿನವೇ (ಜನವರಿ 8) ಬೇಸರ ಆವರಿಸಿದೆ. ಅವರ ಬ್ಯಾನರ್​ ಕಟ್ಟುವಾಗ ಮೂವರು ಅಭಿಮಾನಿಗಳು (Yash Fans) ವಿದ್ಯುತ್​ ಶಾಕ್​ನಿಂದ ನಿಧನರಾಗಿರುವುದು ನೋವಿನ ಸಂಗತಿ. ಗದಗ ಜಿಲ್ಲೆಯ ಸೊರಣಗಿಯಲ್ಲಿ ಈ ಘಟನೆ ನಡೆದಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಯಶ್​ (Yash) ಆಗಮಿಸಿದ್ದಾರೆ. ಬ್ಯಾಂಕಾಕ್​ನಲ್ಲಿ ನಡೆಯುತ್ತಿದ್ದ ‘ಟಾಕ್ಸಿಕ್​’ ಸಿನಿಮಾದ​ ಚಿತ್ರೀಕರಣಕ್ಕೆ ಬ್ರೇಕ್​ ಹಾಕಿ ಅವರು ಬಂದಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣ ( Hubli Airport) ತಲುಪಿದ ಅವರನ್ನು ನೋಡಲು ಜನರು ಮುಗಿಬಿದ್ದಿದ್ದಾರೆ. ಮೃತ ಅಭಿಮಾನಿಗಳಾದ ಹನುಮಂತ ಹರಿಜನ, ಮುರಳಿ ನಡವಿನಮನಿ ಹಾಗೂ ನವೀನ್ ಅವರ ಕುಟುಂಬದವರನ್ನು ಭೇಟಿ ಮಾಡಲು ಸೊರಣಗಿ ಗ್ರಾಮಕ್ಕೆ ಯಶ್​ ತೆರಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us on