ನಟ ಯಶ್ ಅವರಿಗೆ ಹುಟ್ಟುಹಬ್ಬದ ದಿನವೇ (ಜನವರಿ 8) ಬೇಸರ ಆವರಿಸಿದೆ. ಅವರ ಬ್ಯಾನರ್ ಕಟ್ಟುವಾಗ ಮೂವರು ಅಭಿಮಾನಿಗಳು (Yash Fans) ವಿದ್ಯುತ್ ಶಾಕ್ನಿಂದ ನಿಧನರಾಗಿರುವುದು ನೋವಿನ ಸಂಗತಿ. ಗದಗ ಜಿಲ್ಲೆಯ ಸೊರಣಗಿಯಲ್ಲಿ ಈ ಘಟನೆ ನಡೆದಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಯಶ್ (Yash) ಆಗಮಿಸಿದ್ದಾರೆ. ಬ್ಯಾಂಕಾಕ್ನಲ್ಲಿ ನಡೆಯುತ್ತಿದ್ದ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣಕ್ಕೆ ಬ್ರೇಕ್ ಹಾಕಿ ಅವರು ಬಂದಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣ ( Hubli Airport) ತಲುಪಿದ ಅವರನ್ನು ನೋಡಲು ಜನರು ಮುಗಿಬಿದ್ದಿದ್ದಾರೆ. ಮೃತ ಅಭಿಮಾನಿಗಳಾದ ಹನುಮಂತ ಹರಿಜನ, ಮುರಳಿ ನಡವಿನಮನಿ ಹಾಗೂ ನವೀನ್ ಅವರ ಕುಟುಂಬದವರನ್ನು ಭೇಟಿ ಮಾಡಲು ಸೊರಣಗಿ ಗ್ರಾಮಕ್ಕೆ ಯಶ್ ತೆರಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ