ಬಾಡಿಗಾರ್ಡ್​ ಮೇಲೆ ಏಕಾಏಕಿ ಗರಂ ಆದ ಯಶ್​; ಧರ್ಮಸ್ಥಳದಲ್ಲಿ ಅಂಥದ್ದೇನಾಯ್ತು?

|

Updated on: Aug 06, 2024 | 5:40 PM

ನಟ ಯಶ್​ ಅವರು ಧರ್ಮಸ್ಥಳಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆದ ನಂತರ ಅವರರನ್ನು ನೋಡಲು ಫ್ಯಾನ್ಸ್​ ಮುಗಿಬಿದ್ದಿದ್ದಾರೆ. ಈ ವೇಳೆ ಸ್ವಲ್ಪ ನೂಕು ನುಗ್ಗಲು ಉಂಟಾಗಿದೆ. ಸೆಲ್ಫಿಗಾಗಿ ಮುಗಿಬೀಳುವ ಅಭಿಮಾನಿಗಳನ್ನು ನಿಭಾಯಿಸುವುದು ಸುಲಭವಲ್ಲ. ಧರ್ಮಸ್ಥಳದಲ್ಲೂ ಅದೇ ರೀತಿ ಆಗಿದೆ.

‘ರಾಕಿಂಗ್​ ಸ್ಟಾರ್​’ ಯಶ್​ ಅವರು ಫ್ಯಾಮಿಲಿಗೆ ಹೆಚ್ಚು ಸಮಯ ನೀಡುತ್ತಾರೆ. ಇಂದು (ಆಗಸ್ಟ್​ 6) ಅವರು ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಬಂದಿದ್ದಾರೆ. ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಆಗಮಿಸಿದ ಯಶ್​ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಯಶ್​ ಈಗ ಪ್ಯಾನ್​ ಇಂಡಿಯಾ ಸ್ಟಾರ್​. ಅವರನ್ನು ಹತ್ತಿರದಿಂದ ನೋಡಬೇಕು, ಜೊತೆಗೊಂದು ಫೋಟೋ ತೆಗೆಸಿಕೊಳ್ಳಬೇಕು ಎಂಬುದು ಫ್ಯಾನ್ಸ್ ಆಸೆ. ಹಾಗಾಗಿ ಧರ್ಮಸ್ಥಳದಲ್ಲೂ ಯಶ್​ ಜೊತೆ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದರು. ಈ ಸಂದರ್ಭದಲ್ಲಿ ಜನಜಂಗುಳಿ ನಿಭಾಯಿಸಲು ಕೆಲವರನ್ನು ಬಾಡಿಗಾರ್ಡ್ಸ್​ ತಳ್ಳಿದರು. ಇದರಿಂದ ಯಶ್​ ಅವರಿಗೆ ಸಡನ್​ ಆಗಿ ಕೋಪ ಬಂತು. ಯಶ್​ ಗರಂ ಆಗಿ ಪ್ರತಿಕ್ರಿಯಿಸಿದ ವಿಡಿಯೋ ಇಲ್ಲಿದೆ. ‘ಟಾಕ್ಸಿಕ್​’ ಸಿನಿಮಾದ ಕೆಲಸಗಳಲ್ಲಿ ಯಶ್​ ತೊಡಗಿಕೊಂಡಿದ್ದಾರೆ. ಅದರ ನಡುವೆ ಬಿಡುವು ಮಾಡಿಕೊಂಡು ಅವರು ದೇವಸ್ಥಾನಕ್ಕೆ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on