‘ಯಶ್ ಸಹಾಯ ಮಾಡಿದ್ದಾರೆ, ಮತ್ತೆ ಕೇಳೋದು ತಪ್ಪಾಗುತ್ತೆ’; ಹರೀಶ್ ರಾಯ್

Updated on: Aug 29, 2025 | 10:39 AM

ಹರೀಶ್ ರೈ ಅವರು ಸದ್ಯ ಕ್ಯಾನ್ಸರ್​ನಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕ್ಯಾನ್ಸರ್ ಈಗ ದೇಹಕ್ಕೆ ಪಸಿರುಸುತ್ತಿದೆ. ಅವರು ಇದರಿಂದ ಹೊರಗೆ ಬರೋದು ಹೇಗೆ ಎಂಬುದು ತಿಳಿಯದೇ ಒದ್ದಾಡುತ್ತಿದ್ದಾರೆ. ಈ ಮಧ್ಯೆ ಯಶ್ ಸಹಾಯದ ಬಗ್ಗೆ ಹರೀಶ್ ರೈ ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಕೆಜಿಎಫ್’ ಸಿನಿಮಾದಲ್ಲಿ ಚಾಚಾ ಹೆಸರಿನ ಪಾತ್ರ ಮಾಡಿದ್ದ ಹರೀಶ್ ರಾಯ್ (Harish Rai)​ ಈಗ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ. ಅವರು ಎಲ್ಲರ ಸಹಾಯ ಕೇಳುತ್ತಿದ್ದಾರೆ. ಹರೀಶ್ ಅವರಿಗೆ ಯಶ್ ಸಹಾಯ ಮಾಡಿಲ್ಲ ಎಂದೆಲ್ಲ ಕೆಲವರು ಹೇಳಿದ್ದರು. ಈ ವಿಚಾರವಾಗಿ ಅವರು ಮಾತನಾಡಿದ್ದಾರೆ. ಯಶ್ ಮಾಡಿದ ಸಹಾಯವನ್ನು ನೆನಪಿಸಿಕೊಂಡಿದ್ದಾರೆ. ‘ಯಶ್ ಈಗಾಗಲೇ ಸಹಾಯ ಮಾಡಿದ್ದಾರೆ. ಅವರ ಬಳಿ ಮತ್ತೆ ಸಹಾಯ ಕೇಳೋದು ತಪ್ಪಾಗುತ್ತದೆ’ ಎಂದಿದ್ದಾರೆ ಅವರು. ಅದರ ಸಂಪೂರ್ಣ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Aug 29, 2025 10:17 AM
Follow Us
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More