ಹಾಸನ ಎಸ್ಪಿ ಕಚೇರಿ ಹೊರಗೆ ಕಾದು ಕುಳಿತ ಯಶ್ ತಾಯಿ ಪುಷ್ಪಾ
ಹಾಸನದಲ್ಲಿನ ನಿವೇಶನದ ವಿವಾದಕ್ಕೆ ಸಂಬಂಧಪಟ್ಟಂತೆ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ. ಎಸ್ಪಿ ಕಚೇರಿ ಹೊರಗೆ ಅವರು ಕಾದು ಕುಳಿತಿದ್ದಾರೆ. ಸೈಟ್ ಗಲಾಟೆಯಲ್ಲಿ ಸರಿಯಾಗಿ ತನಿಖೆ ಆಗಿಲ್ಲ ಎಂದು ದೂರು ನೀಡಲು ಅವರು ಬಂದಿದ್ದಾರೆ.
ಹಾಸನದಲ್ಲಿನ ನಿವೇಶನದ ಗಲಾಟೆಗೆ ಸಂಬಂಧಪಟ್ಟಂತೆ ಯಶ್ ತಾಯಿ (Yash mother) ಪುಷ್ಪಾ ಅರುಣ್ ಕುಮಾರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ. ಎಸ್ಪಿ ಕಚೇರಿ ಹೊರಗೆ ಅವರು ಕಾದು ಕುಳಿತಿದ್ದಾರೆ. ಸೈಟ್ ಗಲಾಟೆಯಲ್ಲಿ ಸರಿಯಾಗಿ ತನಿಖೆ ಆಗಿಲ್ಲ ಎಂದು ದೂರು ನೀಡಲು ಅವರು ಬಂದಿದ್ದಾರೆ. ಕ್ರಯಪತ್ರಗಳ ದಾಖಲೆ ಸಮೇತವಾಗಿ ಅವರು ಎಸ್ಪಿ ಕಚೇರಿಗೆ ಆಗಮಿಸಿದ್ದಾರೆ. ‘ಸೈಟ್ ಗಲಾಟೆಗೆ ಸಂಬಂಧಿಸಿದಂತೆ ತಕ್ಷಣ ದೂರು ನೀಡಿದ್ದೆ. ಹಾಸನ ಬಡಾವಣೆ ಪೊಲೀಸರು ಸರಿಯಾಗಿ ತನಿಖೆ ಮಾಡಿಲ್ಲ. ರೌಡಿಸಂ ಮತ್ತು ಭೂ ಮಾಫಿಯಾದವರಿಗೆ ಸಹಕಾರ ನೀಡುತ್ತಿದ್ದಾರೆ. ಅತಿಕ್ರಮ ಪ್ರವೇಶ ಮಾಡಿ ಕಾಂಪೌಂಡ್ ಧ್ವಂಸ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ’ ಎಂದು ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಅವರು ದೂರು ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

