‘ಟಾಕ್ಸಿಕ್’ ಬಗ್ಗೆ ಅಪ್ಡೇಟ್ ಕೊಡ್ತೀನಿ: ‘ಮನದ ಕಡಲು’ ಇವೆಂಟ್ನಲ್ಲಿ ಯಶ್ ಮಾತು
ಯೋಗರಾಜ್ ಭಟ್ ನಿರ್ದೇಶಿಸಿ, ಈ ಕೃಷ್ಣಪ್ಪ ನಿರ್ಮಾಣ ಮಾಡಿರುವ ‘ಮನದ ಕಡಲು’ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ನಟ ಯಶ್ ಅತಿಥಿಯಾಗಿ ಆಗಮಿಸಿ, ಇಡೀ ಚಿತ್ರ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಹೊಸ ಪ್ರತಿಭೆಗಳ ಮೇಲೆ ನಿಮ್ಮ ಆರ್ಶೀವಾದ ಇರಲಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡರು.
ಬೆಂಗಳೂರು, ಮಾರ್ಚ್ 23: ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ಸಾಥ್ ನೀಡಿದ್ದಾರೆ. ಇಂದು ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ನಟ ಯಶ್ (Yash), ನನ್ನ ಚಿತ್ರದ ಬಗ್ಗೆ ಇಲ್ಲಿ ಮಾತನಾಡುವುದು ಬೇಡ. ‘ಟಾಕ್ಸಿಕ್’ ಚಿತ್ರದ ಬಗ್ಗೆ ಮಾಹಿತಿ ಕೊಡುತ್ತೇನೆ. ದೊಡ್ಡದಾಗಿ ಕೆಲಸ ಮಾಡುತ್ತಿದ್ದೇವೆ. ನಂಬಿಕೆ ಇಟ್ಟುಕೊಳ್ಳಿ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 23, 2025 11:07 PM