ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಮೃತಳ ಸಹಪಾಠಿಗಳು

Updated on: Jan 09, 2026 | 10:04 PM

ಉಪನ್ಯಾಸಕನ ಅವಮಾನಕ್ಕೆ ಮನನೊಂದು ಡೆಂಟಲ್ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಮೃತಳನ್ನು ಯಶಸ್ವಿನಿ(23) ಎಂದು ಗುರುತಿಸಲಾಗಿದ್ದು, ಬೊಮ್ಮನಹಳ್ಳಿ ಖಾಸಗಿ ಕಾಲೇಜಿನ Oral Medicine and Radiology ವಿಭಾಗದಲ್ಲಿ 3ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಉಪನ್ಯಾಸಕ ಕ್ಲಾಸ್‌ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ ಯಶಸ್ವಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿದ್ಯಾರ್ಥಿಗಳು ಉಪನ್ಯಾಸನಕ ವಿರುದ್ಧ ಸಿಡಿದೆದಿದ್ದಾರೆ.

ಬೆಂಗಳೂರು, (ಜನವರಿ 09): ಉಪನ್ಯಾಸಕನ ಅವಮಾನಕ್ಕೆ ಮನನೊಂದು ಡೆಂಟಲ್ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಮೃತಳನ್ನು ಯಶಸ್ವಿನಿ(23) ಎಂದು ಗುರುತಿಸಲಾಗಿದ್ದು, ಬೊಮ್ಮನಹಳ್ಳಿ ಖಾಸಗಿ ಕಾಲೇಜಿನ Oral Medicine and Radiology ವಿಭಾಗದಲ್ಲಿ 3ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಉಪನ್ಯಾಸಕ ಕ್ಲಾಸ್‌ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ ಯಶಸ್ವಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿದ್ಯಾರ್ಥಿಗಳು ಉಪನ್ಯಾಸನಕ ವಿರುದ್ಧ ಸಿಡಿದೆದಿದ್ದಾರೆ. ಕಾಲೇಜು ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಸ್ಟೀಸ್ ಫಾರ್ ಯಶಸ್ವಿನಿ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೇ ಆತ್ಮಹತ್ಯೆಗೆ ಕಾರಣರಾದ ಉಪನ್ಯಾಸಕನ ವಿರುದ್ಧ ಸೂಕ್ತ ಕ್ರಮವಾಗಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.