ನಾನು ಮತ್ತು ಯತೀಂದ್ರ ಮಾತಾಡಿದ್ದು ಶಾಲಾಕಟ್ಟಡಗಳ ರಿಪೇರಿಗೆ ಸಿಎಸ್ ಆರ್ ಫಂಡಿಂಗ್ ಬಗ್ಗೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Nov 16, 2023 | 2:00 PM

ರಾಜಕೀಯ ಬದುಕಿನಲ್ಲಿ ತಾವು ಟ್ರಾನ್ಸ್ ಫರ್ ಧಂದೆ ಅಥವಾ ಭ್ರಷ್ಟಾಚಾರ ನಡೆಸಿದ್ದು ಸಾಬೀತಾದರೆ ರಾಜಕೀಯದಿಂದ ನಿವೃತ್ತನಾಗುವುದಾಗಿ ಸಿದ್ದರಾಮಯ್ಯ ಹೇಳಿದರು. ಯತೀಂದ್ರ 5 ಜನರ ಪ್ರಸ್ತಾಪ ಮಾಡುತ್ತಿದ್ದರಲ್ಲ ಅಂತ ಕೇಳಿದರೆ, ಸಿಡುಕುವ ಮುಖ್ಯಮಂತ್ರಿ 5 ಜನ ಅಂದರೆ ವರ್ಗಾವಣೆಯಾ ಅಥವಾ ಭ್ರಷ್ಟಾಚಾರನಾ ಅಂತ ಅಂತ ಮರುಸವಾಲು ಹಾಕಿದರು.

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಮತ್ತು ತಮ್ಮ ನಡುವೆ ನಡೆದಿರುವ ಫೋನ್ ಸಂಭಾಷಣೆ ವರ್ಗಾವಣೆಗೆ ಧಂದೆಗೆ ಸಂಬಂಧಿಸಿದ್ದು ಎಂದು ಆರೋಪಿಸಲಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯೆ ನೀಡಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತಾಡಿದ ಅವರು, ವರ್ಗಾವಣೆ ಧಂದೆ ಆರೋಪವನ್ನು ಅಲ್ಲಗಳೆದು, ಮೈಸೂರು ಜಿಲ್ಲೆಯಲ್ಲಿ ಶಾಲಾ ಕಟ್ಟಡಗಳ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ, ಅದಕ್ಕಾಗಿ ಸಿಎಸ್ ಆರ್ (ಕಾರ್ಪೋರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ) (CSR-Corporate Social Responsibility) ಹಣ ಬಿಡುಗಡೆ ಮಾಡುವ ಬಗ್ಗೆ ಯತೀಂದ್ರ ಮಾತಾಡಿದ್ದು ಎಂದು ಹೇಳಿದರು. ರಾಜಕೀಯ ಬದುಕಿನಲ್ಲಿ ತಾವು ಟ್ರಾನ್ಸ್ ಫರ್ ಧಂದೆ ಅಥವಾ ಭ್ರಷ್ಟಾಚಾರ ನಡೆಸಿದ್ದು ಸಾಬೀತಾದರೆ ರಾಜಕೀಯದಿಂದ ನಿವೃತ್ತನಾಗುವುದಾಗಿ ಸಿದ್ದರಾಮಯ್ಯ ಹೇಳಿದರು. ಯತೀಂದ್ರ 5 ಜನರ ಪ್ರಸ್ತಾಪ ಮಾಡುತ್ತಿದ್ದರಲ್ಲ ಅಂತ ಕೇಳಿದರೆ, ಸಿಡುಕುವ ಮುಖ್ಯಮಂತ್ರಿ 5 ಜನ ಅಂದರೆ ವರ್ಗಾವಣೆಯಾ ಅಥವಾ ಭ್ರಷ್ಟಾಚಾರನಾ ಅಂತ ಅಂತ ಮರುಸವಾಲು ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.