ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬ: ಅಧಿಕಾರಿಗಳು, ಗುತ್ತಿಗೆದಾರರಿಗೆ ಖಡಕ್​​ ಎಚ್ಚರಿಕೆ ಕೊಟ್ಟ ಸಚಿವ ಯತೀಂದ್ರ

Edited By:

Updated on: Jul 13, 2026 | 7:13 PM

ಕಲಬುರಗಿಯಲ್ಲಿ ಕುಡಿಯುವ ನೀರಿನ ಯೋಜನೆ ವಿಳಂಬ ಮತ್ತು ರಸ್ತೆಗಳ ದುರಸ್ತಿ ಕಾರ್ಯದ ನಿರ್ಲಕ್ಷ್ಯದ ಬಗ್ಗೆ ಸಚಿವ ಯತೀಂದ್ರ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಾರ್ವಜನಿಕರ ದೂರುಗಳಿಗೆ ಪ್ರತಿಕ್ರಿಯಿಸಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ವ್ಯವಸ್ಥಿತ ನಂಬರ್‌ಗಳನ್ನು ಒದಗಿಸುವಂತೆ ಕಲಬುರಗಿ ನಗರದ ಜಲಭವನದಲ್ಲಿ ನಡೆದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ.

ಕಲಬುರಗಿ, ಜುಲೈ 13: ನಗರದಲ್ಲಿ ಬಹುನಿರೀಕ್ಷಿತ ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬದ ಬಗ್ಗೆ ಸಚಿವ ಯತೀಂದ್ರ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಅರ್ಧಕ್ಕಿಂತ ಹೆಚ್ಚು ಜನರು ಈ ನೀರಿನ ಯೋಜನೆಯ ಮೇಲೆ ಅವಲಂಬಿತರಾಗಿದ್ದು, ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಕಾಮಗಾರಿಯು ಕಳೆದ ವರ್ಷವೇ ಪೂರ್ಣಗೊಳ್ಳಬೇಕಾಗಿತ್ತು, ಆದರೆ ನಾಲ್ಕು ಬಾರಿ ಗಡುವು ವಿಸ್ತರಣೆಯಾಗಿದ್ದರೂ ಕೆಲಸ ಇನ್ನೂ ಮುಗಿದಿಲ್ಲ. ಗುತ್ತಿಗೆದಾರರಿಗೆ ಈಗಾಗಲೇ ದಂಡ ವಿಧಿಸಿದ್ದರೂ, ಕೆಲಸದ ವೇಗ ಹೆಚ್ಚಾಗಿಲ್ಲ. ನಿರ್ದಿಷ್ಟ ಸಮಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಮತ್ತು ಹಾಳಾದ ರಸ್ತೆಗಳನ್ನು ಪುನಃಸ್ಥಾಪಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ. ಸಾರ್ವಜನಿಕರ ಕುಂದುಕೊರತೆಗಳನ್ನು ಸ್ವೀಕರಿಸಲು, ನೋಂದಾಯಿಸಲು ಮತ್ತು ಅನುಸರಿಸಲು ಒಂದು ವ್ಯವಸ್ಥೆ ರೂಪಿಸಬೇಕು. ಸಾರ್ವಜನಿಕರು ಯಾರನ್ನು, ಎಲ್ಲಿ ಸಂಪರ್ಕಿಸಬೇಕು ಎಂಬುದರ ಕುರಿತು ಮಾಹಿತಿ ಹಾಗೂ ಸಂಖ್ಯೆಗಳನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us