ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಸಚಿವರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದು, ಪದಗ್ರಹಣದ ಬೆನ್ನಲ್ಲೇ ಯತೀಂದ್ರ ಅವರು ವೇದಿಕೆಯಲ್ಲೇ ತಮ್ಮ ತಂದೆಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಪುತ್ರನ ಭುಜ ಮುಟ್ಟಿ ಸಿದ್ದರಾಮಯ್ಯ ಹಾರೈಸಿದ್ದಾರೆ.
ಬೆಂಗಳೂರು, ಜೂನ್ 03: ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಡಾ. ಯತೀಂದ್ರ ಸಿದ್ದರಾಮಯ್ಯ ಸೇರ್ಪಡೆಯಾಗಿದ್ದಾರೆ. ರಾಜ್ಯಪಾಲರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದು, ಈ ವೇಳೆ ತದೇಕ ಚಿತ್ತದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರನನ್ನು ನೋಡಿದ್ದಾರೆ. ಜೊತೆಗೆ ಪಕ್ಕದಲ್ಲಿದ್ದ ಹೈಕೋರ್ಟ್ ಸಿಜೆಗೆ ತಮ್ಮ ಪುತ್ರ ಎಂದು ಪರಿಚಯಿಸಿದ್ದಾರೆ. ಪ್ರಮಾಣವಚನ ಬಳಿಕ ತಂದೆಯ ಕಾಲುಮುಟ್ಟಿ ನಮಸ್ಕರಿಸಿ ಯತೀಂದ್ರ ಕೂಡ ಆಶೀರ್ವಾದ ಪಡೆದಿದ್ದಾರೆ. ಪುತ್ರ ಭುಜ ಮುಟ್ಟಿ ಮಾಜಿ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

