ವರುಣಾದಲ್ಲಿ ಒಕ್ಕಲಿಗರ ಮತ ಸೆಳೆಯಲು ಮುಂದಾದ ಕಾಂಗ್ರೆಸ್: ಸಮುದಾಯದ ನಾಯಕರ ಜೊತೆ ಸಭೆ ನಡೆಸಿದ ಯತೀಂದ್ರ ಸಿದ್ದರಾಮಯ್ಯ

ವರುಣಾದಲ್ಲಿ ಒಕ್ಕಲಿಗರ ಮತ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಮೈಸೂರು ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ವಿಜಯಕುಮಾರ್ ನೇತೃತ್ವದಲ್ಲಿ ಕ್ಷೇತ್ರದ ರಂಗಸಮುದ್ರದಲ್ಲಿ ಒಕ್ಕಲಿಗ ಮುಖಂಡರ ಜೊತೆ ಸಭೆ ನಡೆಸಿದ್ದಾರೆ.

Follow us
|

Updated on: May 03, 2023 | 10:00 AM

ಮೈಸೂರು: ರಾಜ್ಯದ ಚಿತ್ತ ವರುಣಾದತ್ತ ನೆಟ್ಟಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಘೋಷಿಸಿಕೊಂಡರತೆ ಅವರದ್ದು ಇದು ಕೊನೆಯ ಚುನಾವಣೆ. ಹೀಗಾಗಿ ತವರು ಕ್ಷೇತ್ರದಲ್ಲಿ ಸ್ಪರ್ಧಿಸಿ ನಿವೃತ್ತಿ ಹೊಂದುವ ವಿಚಾರದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಶತಾಯಗತಾಯ ಗೆಲ್ಲಲು ನಾನಾ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಈ ಸಂಬಂಧ ವರುಣಾದಲ್ಲಿ ಒಕ್ಕಲಿಗರ ಮತ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಮೈಸೂರು ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ವಿಜಯಕುಮಾರ್ ನೇತೃತ್ವದಲ್ಲಿ ಕ್ಷೇತ್ರದ ರಂಗಸಮುದ್ರದಲ್ಲಿ ಒಕ್ಕಲಿಗ ಮುಖಂಡರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವರುಣಾ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ವರುಣಾದಲ್ಲಿಯೇ 2 ದಿನದ ಹಿಂದೆ ಲಿಂಗಾಯತ ಮುಖಂಡರ ಜೊತೆ ಕೈ ನಾಯಕರು ಸಭೆ ನಡೆಸಿದ್ದರು.