Karnataka Assembly Polls: ವರುಣಾದಲ್ಲಿ ಸಿದ್ದರಾಮಯ್ಯ ಪರ ಮತದಾರರ ಮುಂದೆ ಎಮೋಶನಲ್ ಕಾರ್ಡ್ ಪ್ಲೇ ಮಾಡುತ್ತಿರುವ ಯತೀಂದ್ರ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 04, 2023 | 10:09 AM

ಸಿದ್ದರಾಮಯ್ಯ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಜೆಡಿಎಸ್ ಮತ್ತು ಬಿಜೆಪಿ ಒಂದುಗೂಡಿ ಷಡ್ಯಂತ್ರವೊಂದನ್ನು ರಚಿಸಿ ಅವರನ್ನು ಸೋಲಿಸುತ್ತಾರೆ, ಹಾಗಾಗಲು ಬಿಡಬೇಡಿ, ಎಂದು ಯತೀಂದ್ರ ಹೇಳುತ್ತಿದ್ದಾರೆ

ಮೈಸೂರು: ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ (Siddaramaiah) ಪರ ಅವರ ಮಗ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಪ್ರಚಾರ ಮಾಡುತ್ತಿದ್ದಾರೆ. ತಮ್ಮ ತಂದೆಯನ್ನು ಗೆಲ್ಲ್ಲಿಸುವಂತೆ ಕ್ಷೇತ್ರದ ಮತದಾರರಿಗೆ ಯತೀಂದ್ರ ಭಾವನಾತ್ಮಕವಾಗಿ ಅಪೀಲ್ ಮಾಡುತ್ತಿದ್ದಾರೆ. ಅವರಿಗೀಗ 76 ವರ್ಷ, ಈ ಚುನಾವಣೆಯ ನಂತರ ಅವರು ಚುನಾವಣಾ ರಾಜಕೀಯದಿಂದ (electoral politics) ನಿವೃತ್ತರಾಗುತ್ತಾರೆ, ಹಾಗಾಗಿ ಅವರನ್ನು ಗೆಲ್ಲಿಸಿ ಅಂತ ಯತೀಂದ್ರ ಎಮೋಶನಲ್ ಕಾರ್ಡ್ ಪ್ಲೇ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಜೆಡಿಎಸ್ ಮತ್ತು ಬಿಜೆಪಿ ಒಂದುಗೂಡಿ ಷಡ್ಯಂತ್ರವೊಂದನ್ನು ರಚಿಸಿ ಅವರನ್ನು ಸೋಲಿಸುತ್ತಾರೆ, ಹಾಗಾಗಲು ಬಿಡಬೇಡಿ, ಎಂದು ಯತೀಂದ್ರ ಹೇಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 04, 2023 10:08 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.