ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ಬಿಚ್ಚಿಟ್ಟ ಯತೀಂದ್ರ

Edited By:

Updated on: May 30, 2026 | 9:04 PM

ಯತೀಂದ್ರ ಸಿದ್ದರಾಮಯ್ಯನವರಿಗೆ ಒಂದು ಒಳ್ಳೆಯ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಯತೀಂದ್ರ ಅವರು ಡಿಸಿಎಂ ಆಗಲಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ. ಆದ್ರೆ, ಡಿಸಿಎಂ ಆಗುತ್ತಾರೋ ಬಿಡುತ್ತಾರೋ ಗೊತ್ತಿಲ್ಲ. ಡಿಕೆಶಿ ಸಚಿವ ಸಂಪುಟದಲ್ಲಿ ಯತೀಂದ್ರ ಅವರಿಗೆ ಒಂದು ಸ್ಥಾನ ಖಚಿತ. ಈ ಬಗ್ಗೆ ಹೈಕಮಾಂಡ್ ಕೊಟ್ಟ ಭರವಸೆಯನ್ನು ಸ್ವತಃ ಯತೀಂದ್ರ ಅವರೇ ಬಹಿರಂಗಪಡಿಸಿದ್ದಾರೆ.

ಬೆಂಗಳೂರು, (ಮೇ 30): ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕರ್ನಾಟಕದ ಮುಂದಿನ ಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು ರಾಹುಲ್ ಗಾಂಧಿ ನೀಡಿದ ಒಂದೇ ಒಂದು ಸೂಚನೆ ಯಾವುದೇ ತಂಟೆ ತಗಾದೆ ತಗೆಯದೇ ಸಿದ್ದರಾಂಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾದರಿಯಾಗಿದ್ದಾರೆ. ಇನ್ನು ಹೈಕಮಾಂಡ್ ಸಹ ಸಿದ್ದರಾಮಯ್ಯನವರ ನಡೆಗೆ ಶ್ಲಾಘಿಸಿದ್ದು, ಖುದ್ದು ರಾಹುಲ್ ಗಾಂಧಿಯವರೇ ಸಿದ್ದರಾಮಯ್ಯನವರನ್ನ ದೆಹಲಿಗೆ ಕರೆಯಿಸಿಕೊಂಡು ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಇದೇ ವೇಳೆ ನಿಮ್ಮ ತ್ಯಾಗಕ್ಕೆ ಪುತ್ರ ಯತೀಂದ್ರ ಸಿದ್ದರಾಮಯ್ಯನವರಿಗೆ ಒಂದು ಒಳ್ಳೆಯ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಯತೀಂದ್ರ ಅವರು ಡಿಸಿಎಂ ಆಗಲಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ. ಆದ್ರೆ, ಡಿಸಿಎಂ ಆಗುತ್ತಾರೋ ಬಿಡುತ್ತಾರೋ ಗೊತ್ತಿಲ್ಲ. ಡಿಕೆಶಿ ಸಚಿವ ಸಂಪುಟದಲ್ಲಿ ಯತೀಂದ್ರ ಅವರಿಗೆ ಒಂದು ಸ್ಥಾನ ಖಚಿತ. ಈ ಬಗ್ಗೆ ಹೈಕಮಾಂಡ್ ಕೊಟ್ಟ ಭರವಸೆಯನ್ನು ಸ್ವತಃ ಯತೀಂದ್ರ ಅವರೇ ಬಹಿರಂಗಪಡಿಸಿದ್ದಾರೆ.

Loading...
Unable to load recommendations.
Follow Us