ಯತ್ನಾಳ್ ಉಚ್ಚಾಟನೆ ದುರದೃಷ್ಟಕರ, ವಿಶ್ಲೇಷಣೆ ಮಾಡುವ ಗೋಜಿಗೆ ಹೋಗಲ್ಲ: ಸಿಟಿ ರವಿ, ಪರಿಷತ್ ಸದಸ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Mar 27, 2025 | 1:51 PM

ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಯಾಕೆ ಭೇಟಿಯಾಗಿದ್ದಾರೆಂದು ಅವರೇ ಹೇಳಬೇಕು, ಆದರೆ ಅವರಿಬ್ಬರ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ಮಾತ್ರ ನೋಡಬಾರದು, ಸತೀಶ್ ಜಾರಕಿಹೊಳಿ ರಾಜ್ಯದ ಒಬ್ಬ ಸಚಿವರಾಗಿದ್ದಾರೆ, ರಾಜ್ಯದ ಹಿತದೃಷ್ಟಿಯಿಂದ ಕೇಂದ್ರ ಸಚಿವರನ್ನು ಭೇಟಿಯಾಗಿರಬಹುದು ಎಂದು ಸಿಟಿ ರವಿ ಹೇಳಿದರು.

ಚಿಕ್ಕಮಗಳೂರು, ಮಾರ್ಚ್ 27: ಬಿಜೆಪಿ ರಾಜ್ಯ ಘಟಕದಲ್ಲಿ ರೆಬೆಲ್ ಶಾಸಕ ಎನಿಸಿಕೊಂಡು ರಾಜ್ಯ ನಾಯಕತ್ವಕ್ಕೆ ಪದೇಪದೆ ಸವಾಲು ಹಾಕಿದ್ದ ಬಸನಗೌಡ ಪಾಟೀಲ್ ಯತ್ನಾಳ್​ರನ್ನು (Basangouda Patil Yatnal) ಪಕ್ಷದಿಂದ ಉಚ್ಚಾಟಿಸಿರುವುದಕ್ಕೆ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ನಡೆದಿರುವ ಬೆಳವಣಿಗೆ ದುರದೃಷ್ಟಕರವಾದದ್ದು, ಆದರೆ ತಾನು ವ್ಯಕ್ತಿಗಿಂತ ಪಕ್ಷ ಮತ್ತು ಪಕ್ಷಕ್ಕಿಂತ ದೇಶ ಮುಖ್ಯ ಎಂದು ನಂಬಿರುವವನು, ಉಚ್ಚಾಟನೆ ವಿಷಯವನ್ನು ವಿಶ್ಲೇಷಿಸುವ ಗೋಜಿಗೆ ಹೋಗಲ್ಲ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮೇಕೆದಾಟು ಯೋಜನೆಗೆ ಕರ್ನಾಟಕವು ತಮಿಳುನಾಡನ್ನು ಒಪ್ಪಿಸಿದರೆ ಕೇಂದ್ರ ಕಣ್ಣುಮುಚ್ಚಿ ಅನುಮತಿ ನೀಡುತ್ತದೆ: ರವಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.