Assembly Polls: ಸಿದ್ದರಾಮಯ್ಯ ಅಂತಿಮವಾಗಿ ವರುಣಾದಿಂದಲೇ ಸ್ಪರ್ಧಿಸೋದು ಅಂತ ಮೊದಲೇ ಹೇಳಿದ್ದೆವು: ಸಿಟಿ ರವಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 25, 2023 | 5:44 PM

ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ನಾಯಕನಿಗೆ ರಾಜ್ಯದಲ್ಲಿ ಒಂದು ಸುರಕ್ಷಿತ ಕ್ಷೇತ್ರವಿಲ್ಲ ಅಂತಾದ್ರೆ ಆ ಪಕ್ಷ ಗೆಲ್ಲುವುದು ಸಾಧ್ಯವೇ ಎಂದು ರವಿ ಪ್ರಶ್ನಿಸಿದರು.

ದಾವಣಗೆರೆ: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಮಹಾಸಂಗಮದಲ್ಲಿ ಭಾಗಿಯಾಗಿದ್ದ ಚಿಕ್ಕಮಗಳೂರು ಶಾಸಕ ಸಿಟಿ ರವಿ (CT Ravi) ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕಸ ಸಿದ್ದರಾಮಯ್ಯನವರಿಗೆ (Siddaramaiah) ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಿರುವುದಕ್ಕೆ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ವಿನಾಕಾರಣ ಬೇರೆ ಬೇರೆ ಕ್ಷೇತ್ರಗಳ ಹೆಸರುಗಳನ್ನು ತೇಲಿಬಿಡುತ್ತಿದ್ದಾರೆ, ಅವರು ವರುಣಾದಿಂದಲೇ ಸ್ಪರ್ಧಿಸುವುದು ನಿಶ್ಚಿತ ಎಂದು ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ತಾನು ಆಗಾಗ ಹೇಳಿದ್ದು ನಿಜವಾಗಿದೆ. ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ನಾಯಕನಿಗೆ ರಾಜ್ಯದಲ್ಲಿ ಒಂದು ಸುರಕ್ಷಿತ ಕ್ಷೇತ್ರವಿಲ್ಲ ಅಂತಾದ್ರೆ ಆ ಪಕ್ಷ ಗೆಲ್ಲುವುದು ಸಾಧ್ಯವೇ ಎಂದು ರವಿ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.