AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ ತಪ್ಪಿಸಿರೋದು ಯಡಿಯೂರಪ್ಪ ಮತ್ತು ವಿಜಯೇಂದ್ರ: ಬಸನಗೌಡ ಯತ್ನಾಳ್

ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ ತಪ್ಪಿಸಿರೋದು ಯಡಿಯೂರಪ್ಪ ಮತ್ತು ವಿಜಯೇಂದ್ರ: ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 05, 2025 | 3:15 PM

Share

ನಿನ್ನೆ ವಿಜಯೇಂದ್ರ ಬೆಂಬಲಿಗರು ನಡೆಸಿದ ಸ್ವಾಮೀಜಿಗಳ ಸಭೆಯಲ್ಲಿ ಒಬ್ಬರಾದರೂ ಪ್ರತಿಷ್ಠಿತ ಮಠಾಧೀಶ ಇರಲಿಲ್ಲ, ಅವರೆಲ್ಲರಿಗೆ ಸ್ವಾಮೀಜಿಗಳ ಉಡಿಗೆ ತೊಡಿಸಿ ಸಭೆಯಲ್ಲಿ ಕೂರಿಸಿದಂತಿತ್ತು, ಅವರ ಗುರುತೇ ಪ್ರಾಯಶಃ ವೀರಶೈವ ಲಿಂಗಾಯತರಿಗೆ ಇರಲಾರದು, ವೀರಶೈವ ಲಿಂಗಾಯತ ಮಹಾಸಭಾದ ಬೆಂಬಲ ಕೋರಿ ಶಾಮನೂರ ಶಿವಶಂಕ್ರಪ್ಪನವರ ಮನೆಗೆ ವಿಜಯೇಂದ್ರ ಹೋಗಿದ್ದು ಗುಟ್ಟಾಗಿ ಉಳಿದಿಲ್ಲ ಎಂದು ಯತ್ನಾಳ್ ಹೇಳಿದರು

ಬೆಂಗಳೂರು, ಮಾರ್ಚ್ 5 : ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಬಿಎಸ್ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರರನ್ನು (BY Vijayendra) ತಮ್ಮ ಎಂದಿನ ಶೈಲಿಯಲ್ಲಿ ಟೀಕಿಸಿದರು. ವೀರಶೈವ ಲಿಂಗಾಯತರಿಗೆ 2 ಎ ಮೀಸಲಾತಿ ತಪ್ಪಿಸಿದ್ದೇ ಯಡಿಯೂರಪ್ಪ ಮತ್ತು ವಿಜಯೇಂದ್ರ, ಅವರ ನಾಯಕತ್ವವನ್ನು ವೀರಶೈವ ಲಿಂಗಾಯತ ಸಮುದಾಯ ಒಪ್ಪುವುದು ಸಾಧ್ಯವೇ ಇಲ್ಲ ಎಂದು ಹೇಳಿದರು. ಸುಮಾರು ಒಂದು ತಿಂಗಳಿಂದ ಮೌನವಾಗಿದ್ದ ಯತ್ನಾಳ್ ಈಗ ಪುನಃ ಯಡಿಯೂರಪ್ಪ ಕುಟುಂಬವನ್ನು ಟೀಕಿಸಲು ಆರಂಭಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಲಿಂಗಾಯತ ಸಮರ; ಯತ್ನಾಳ್ ವಿರುದ್ಧ ಅಖಾಡಕ್ಕಿಳಿದ ವಿಜಯೇಂದ್ರ ಬಣ 

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.