ಯಡಿಯೂರಪ್ಪರ ಪಿಎ ಆಗಿದ್ದ ಸಂತೋಷ್ ಕಾಂಗ್ರೆಸ್ ಶಾಸಕರಿಗೆ ರೂ.50 ಕೋಟಿ, ಮಂತ್ರಿಗಿರಿಯ ಆಮಿಶವೊಡ್ಡುತ್ತಿದ್ದಾನೆ: ರವಿ ಗಣಿಗ, ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Oct 27, 2023 | 11:53 AM

ಶಾಸಕರನ್ನು ವಿಮಾನಗಳಲ್ಲಿ ದೆಹಲಿಗೆ ಕಳಿಸುವ ಮತ್ತು ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸುವ ವ್ಯವಸ್ಥೆ ಮಾಡಲಾಗುವುದು ಎಂದು ಸಂತೋಷ್ ಆಡಿರುವ ಮಾತುಗಳ ಆಡಿಯೋ ಮತ್ತು ವಿಡಿಯೋ ಕ್ಲಿಪ್ಪಿಂಗ್ ಗಳು ತಮ್ಮಲ್ಲಿದ್ದು ಅವುಗಳನ್ನು ಸೂಕ್ತ ಸಮಯದಲ್ಲಿ ಬಹಿರಂಗ ಮಾಡಲಾಗುವುದು ಎಂದು ರವಿ ಹೇಳಿದರು.

ದಾವಣಗೆರೆ: ಹಿಂದೆ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವಲ್ಲಿ ಯಶ ಕಂಡಿದ್ದ ಬಿಜೆಪಿಯ ತಂಡಗಳು ಮತ್ತೊಮ್ಮೆ ಆಪರೇಶನ್ ಕಮಲಕ್ಕೆ ಮುಂದಾಗಿವೆ ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ (Ravi Ganiga) ಇಂದು ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ರವಿ, ಹಿಂದೆ ಬಿಎಸ್ ಯಡಿಯೂರಪ್ಪನವರ (BS Yediyurappa) ಆಪ್ತ ಕಾರ್ಯದರ್ಶಿಯಾಗಿದ್ದ ಎನ್ ಆರ್ ಸಂತೋಷ್ (NR Santosh) ಒಂದು ತಂಡದ ನೇತೃತ್ವ ವಹಿಸಿ ಕಾಂಗ್ರೆಸ್ ಪಕ್ಷದ ನಾಲ್ವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾನೆ ಎಂದು ರವಿ ಹೇಳಿದರು. ಜೆಡಿಎಸ್ ಪಕ್ಷ ಸೇರಿ ವಿಧಾನ ಸಭಾ ಚುನಾವಣೆಯಲ್ಲಿ ಸೋತ್ರೂ ಇವನಿಗೆ ಬುದ್ಧಿ ಬಂದಿಲ್ಲ ಎಂದ ರವಿ, ಕಾಂಗ್ರೆಸ್ ಶಾಸಕರಿಗೆ ರೂ. 50 ಕೋಟಿ ಹಾಗೂ ಮಂತ್ರಿ ಸ್ಥಾನ ನೀಡುವ ಆಮಿಶವನ್ನು ಸಂತೋಷ್ ಒಡ್ಡಿದ್ದಾನೆ ಅಂತ ಹೇಳಿದರು. ಶಾಸಕರನ್ನು ವಿಮಾನಗಳಲ್ಲಿ ದೆಹಲಿಗೆ ಕಳಿಸುವ ಮತ್ತು ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸುವ ವ್ಯವಸ್ಥೆ ಮಾಡಲಾಗುವುದು ಎಂದು ಸಂತೋಷ್ ಆಡಿರುವ ಮಾತುಗಳ ಆಡಿಯೋ ಮತ್ತು ವಿಡಿಯೋ ಕ್ಲಿಪ್ಪಿಂಗ್ ಗಳು ತಮ್ಮಲ್ಲಿದ್ದು ಅವುಗಳನ್ನು ಸೂಕ್ತ ಸಮಯದಲ್ಲಿ ಬಹಿರಂಗ ಮಾಡಲಾಗುವುದು ಎಂದು ರವಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.