ದೇವೇಗೌಡರ ಕುಟುಂಬಕ್ಕೆ ಮುಡಾದಿಂದ 48 ಸೈಟು ಹಂಚಿಕೆಯಾಗಿದೆ ಅಂತ ಯಡಿಯೂರಪ್ಪ ಹೇಳಿದ್ದರು: ಪ್ರದೀಪ್ ಈಶ್ವರ್

ಇಂದು ಆರಂಭವಾಗಿರುವ ವಿಧಾನಸಭಾ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರು ಸಿದ್ದರಾಮಯ್ಯ ಸರ್ಕಾರದ ಮೇಲೆ ದಾಳಿ ನಡೆಸಲು ಹಲವಾರು ಅಸ್ತ್ರಗಳನ್ನು ತಮ್ಮೊಂದಿಗೆ ಇಟ್ಟುಕೊಂಡಿದ್ದಾರೆ ಮತ್ತು ಅವುಗಳಲ್ಲೊಂದು ಮುಡಾ ಹಗರಣ. ಅದರೆ, ದಾಳಿ ಎದುರಿಸಲೂ ತಮ್ಮ ಬತ್ತಳಿಕೆಯಲ್ಲೂ ಅಸ್ತ್ರಗಳಿವೆ ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಹೇಳಿದ್ದಾರೆ.

ದೇವೇಗೌಡರ ಕುಟುಂಬಕ್ಕೆ ಮುಡಾದಿಂದ 48 ಸೈಟು ಹಂಚಿಕೆಯಾಗಿದೆ ಅಂತ ಯಡಿಯೂರಪ್ಪ ಹೇಳಿದ್ದರು: ಪ್ರದೀಪ್ ಈಶ್ವರ್
|

Updated on: Jul 15, 2024 | 1:05 PM

ಬೆಂಗಳೂರು: ವಿಧಾನ ಮಂಡಲದ ಜಂಟಿ ಅಧಿವೇಶನ ಇಂದು ಆರಂಭಗೊಂಡಿದೆ. ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಗೆ ಅಕ್ರಮವಾಗಿ 14 ನಿವೇಶನನಗಳು ಹಂಚಿಕೆಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆಯ ನೈತಿಕತೆಯನ್ನು ಪ್ರಶ್ನಿಸಿದರು. ವಿಧಾನ ಸೌಧದ ಅವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, 2011ಮಾರ್ಚ್ 17ರಂದು ವಿಧಾನಸಭೆಯಲ್ಲಿ ಆಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಮ್ಮ ಭಾಷಣದಲ್ಲಿ ಮುಡಾದಿಂದ ಹೆಚ್ ಡಿ ದೇವೇಗೌಡರ ಕುಟುಂಬಕ್ಕೆ 48ಸೈಟುಗಳು ಮತ್ತು ಈಗ ಕೇಂದ್ರ ಸಚಿವರಾಗಿರುವ ಹೆಚ್ ಡಿ ಕುಮಾರಸ್ವಾಮಿಯವರಿಗೆ 300 X 200ಚದರ ಅಡಿ ಸೈಟು ಹಂಚಿಕೆಯಾಗಿರುವ ಸಂಗತಿಯನ್ನು ಹೇಳಿದ್ದರು. ಪರಿಸ್ಥಿತಿ ಹೀಗಿರುವಾಗ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಅದ್ಯಾವ ನೈತಿಕತೆಯೊಂದಿಗೆ ಪ್ರತಿಭಟನೆ ಮಾಡುತ್ತಾರೆ ಎಂದು ಈಶ್ವರ್ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಶಾಸಕ ಸ್ಥಾನಕ್ಕೆ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಿದ್ರಾ? ರಾಜೀನಾಮೆ ಪತ್ರ ವೈರಲ್!

Follow us