ರೈತ ಮಹಿಳೆಯ ನೋವು, ಅನುಭವಿಸುತ್ತಿರುವ ಯಾತನೆ ಕೇಳಿಸಿಕೊಂಡಾಗ ಯಡಿಯೂರಪ್ಪ ಸದನದಲ್ಲಿ ಆಡಿದ ಮಾತು ನೆನಪಾಗುತ್ತದೆ

ರೈತ ಮಹಿಳೆಯ ನೋವು, ಅನುಭವಿಸುತ್ತಿರುವ ಯಾತನೆ ಕೇಳಿಸಿಕೊಂಡಾಗ ಯಡಿಯೂರಪ್ಪ ಸದನದಲ್ಲಿ ಆಡಿದ ಮಾತು ನೆನಪಾಗುತ್ತದೆ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Mar 23, 2022 | 11:25 PM

ಮಹಿಳೆಯ ಸಾಲ ಸೋಲ ಮಾಡಿ ಜಮೀನಲ್ಲಿ ಬೆವರು ಸುರಿಸಿದ್ದರು. ಅವರ ಶ್ರಮಕ್ಕೆ ಪ್ರತಿಫಲ ಸಿಗುವುದರಲ್ಲಿತ್ತು. ಅದರೆ ಚೆಸ್ಕಾಂ ಅವರ ಶ್ರಮವನ್ನು ವ್ಯರ್ಥ ಹೋಗುವಂತೆ ಮಾಡಿದೆ.

ನಿಮಗೆ ನೆನಪಿರಬಹುದು. ಮೊನ್ನೆ ಸದನದಲ್ಲಿ ಜೆಡಿಎಸ್ ಶಾಸಕರೊಬ್ಬರು ರೈತರ ಸಮಸ್ಯೆಗಳು ಮತ್ತು ಅವರ ಪಂಪ್ ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದ ಬಗ್ಗೆ ಪ್ರಶ್ನೆ ಮಾಡಿದಾಗ ಸರ್ಕಾರದ ಪರವಾಗಿ ಎದ್ದುನಿಂತು ಮಾತಾಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು (BS Yediyurappa), ಜೆಡಿಎಸ್ ನಾಯಕ ವಿಷಯವನ್ನು ಸರಿಯಾಗಿ ಅರ್ಥಮಾಕೊಳ್ಳದೆ ಮಾತಾಡುತ್ತಿದ್ದಾರೆ; 2,3, 4, 5 ಮತ್ತು 8 ಹೆಚ್ ಪಿ ಸಾಮರ್ಥ್ಯದ ಪಂಪ್ ಸೆಟ್ ಗಳನ್ನು ಹೊಂದಿರುವ ಎಲ್ಲ ರೈತರಿಗೆ ಉಚಿತವಾಗಿ ವಿದ್ಯುತ್ ಪೂರಸಲಾಗುತ್ತಿದೆ ಎಂದು ಹೇಳಿ ಶಾಸಕರ ಬಾಯಿ ಮುಚ್ಚಿಸಿದ್ದರು. ಆದರೆ ವಾಸ್ತವಾಂಶ ನಿಮಗೆ ಈ ವಿಡಿಯೋನಲ್ಲಿ ಕಾಣುತ್ತದೆ. ಈ ಹಿರಿಯ ರೈತ ಮಹಿಳೆಯ ಮಾತು ಕೇಳಿ. ನಾವು ಮಾತ್ರ ಅಲ್ಲ ಸರ್ಕಾರ ಮತ್ತು ಯಡಿಯೂರಪ್ಪನವರೂ ಕೇಳಬೇಕು.

ಮಹಿಳೆಯ ಜಮೀನಲ್ಲಿ ಬೋರಿದೆ, ನೀರಿದೆ ಪಂಪ್ ಸೆಟ್ ಕೂಡ ಇದೆ. ಆದರೆ ಚೆಸ್ಕಾಂ ಸಮಯಕ್ಕೆ ಸರಿಯಾಗಿ ವಿದ್ಯುತ್ ಪೂರೈಸದ ಕಾರಣ ಕೈಗೆ ಬಂದಿದ್ದ ಬೆಳೆ ಒಣಗಿ ಹಾಳಾಗಿದೆ. ಮಹಿಳೆಯ ಸಾಲ ಸೋಲ ಮಾಡಿ ಜಮೀನಲ್ಲಿ ಬೆವರು ಸುರಿಸಿದ್ದರು. ಅವರ ಶ್ರಮಕ್ಕೆ ಪ್ರತಿಫಲ ಸಿಗುವುದರಲ್ಲಿತ್ತು. ಅದರೆ ಚೆಸ್ಕಾಂ ಅವರ ಶ್ರಮವನ್ನು ವ್ಯರ್ಥ ಹೋಗುವಂತೆ ಮಾಡಿದೆ.

ರೈತ ಮಹಿಳೆಯ ಹೆಸರು ನಮಗೆ ಗೊತ್ತಿಲ್ಲ ಮಾರಾಯ್ರೇ. ಅದರೆ ಅವರ ಕಷ್ಟ, ನೋವು, ಬೇಸರ ಮತ್ತು ಹತಾಷೆ ನಮಗೆ ಅರ್ಥವಾಗುತ್ತದೆ. ಅವರ ನೋವು ಸದನದಲ್ಲಿ ಕೂತು ಮಾತಾಡುವವರು ಸಹ ಅರ್ಥಮಾಡಿಕೊಳ್ಳಬೇಕು. ಜೆಡಿಎಸ್ ಶಾಸಕನ ಗ್ರೌಂಡ್ ವರ್ಕ್ ಸರಿಯಾಗಿತ್ತು. ಅವರು ಬಹಳ ಮಹತ್ವದ ಪ್ರಶ್ನೆ ಕೇಳಿದ್ದರು. ಆದರೆ, ಯಡಿಯೂರಪ್ಪನವರ ಎದುರು ಅವರು ತಮ್ಮ ಪ್ರಶ್ನೆಯನ್ನು ಸರಿಯಾಗಿ ಪ್ರಸೆಂಟ್ ಮಾಡಲು ಸಾಧ್ಯವಾಗಲಿಲ್ಲ.

ಅದರೆ ವಸ್ತುಸ್ಥಿತಿ ನಿಮಗೆ ವಿಡಿಯೋನಲ್ಲಿ ಕಾಣುತ್ತಿದೆ.

ಇದನ್ನೂ ಓದಿ:  ಸ್ವಾಮಿನಾಥನ್ ಆಯೋಗದ ಶೇಕಡ 90ರಷ್ಟು ಶಿಫಾರಸ್ಸುಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ: ಬಿ ಎಸ್ ಯಡಿಯೂರಪ್ಪ

Follow us
ವಾಚ್ ಕಳ್ಳತನ ಮಾಡಿದಳೆಂದು ವಿದ್ಯಾರ್ಥಿನಿ ಮೇಲೆ ವಾಲಿಬಾಲ್ ಕೋಚ್ ಹಲ್ಲೆ
ವಾಚ್ ಕಳ್ಳತನ ಮಾಡಿದಳೆಂದು ವಿದ್ಯಾರ್ಥಿನಿ ಮೇಲೆ ವಾಲಿಬಾಲ್ ಕೋಚ್ ಹಲ್ಲೆ
ಸಿಎಂ ಸ್ವಾಗತಕ್ಕೆ ಬಂದ ಪಕ್ಷದ ಕಾರ್ಯಕರ್ತರು ಬ್ಯಾರಿಕೇಡ್ ತಳ್ಳಿ ನುಗ್ಗಿದರು
ಸಿಎಂ ಸ್ವಾಗತಕ್ಕೆ ಬಂದ ಪಕ್ಷದ ಕಾರ್ಯಕರ್ತರು ಬ್ಯಾರಿಕೇಡ್ ತಳ್ಳಿ ನುಗ್ಗಿದರು
ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ
ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ
ಸುರೇಶ್ ಮೈಸೂರಿಗೆ ಹೋದಾಗ ಎಲ್ಲ ವ್ಯವಸ್ಥೆ ಮಂಜುನಾಥ್ ಮಾಡ್ತಾರೆ: ಗಂಗರಾಜು
ಸುರೇಶ್ ಮೈಸೂರಿಗೆ ಹೋದಾಗ ಎಲ್ಲ ವ್ಯವಸ್ಥೆ ಮಂಜುನಾಥ್ ಮಾಡ್ತಾರೆ: ಗಂಗರಾಜು
ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ
ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ