Karnataka Assembly Polls: ಸಿದ್ದರಾಮಯ್ಯ ಸ್ವಕ್ಷೇತ್ರ ವರುಣಾ ಪ್ರಚಾರದಲ್ಲಿ ಕಂಡಿದ್ದು ಅವರ ಫೋಟೋವಿದ್ದ ಹಳದಿ ಧ್ವಜಗಳು

Updated on: May 04, 2023 | 3:10 PM

ಕ್ಷೇತ್ರದಲ್ಲಿ ಮೊನ್ನೆಯಷ್ಟೇ ಕೇಂದ್ರ ಗೃಹ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಪ್ರಚಾರ ನಡೆಸಿದ್ದರು.

ಮೈಸೂರು: ಪಕ್ಷದ ಅಭ್ಯರ್ಥಿ ಗಳ ಪರ ರಾಜ್ಯಾದಂತ ಪ್ರಚಾರ ನಡೆಸಿದ ಸಿದ್ದರಾಮಯ್ಯ ಇವತ್ತು ತಮ್ಮ ಸ್ವಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು. ಸಿದ್ದರಾಮಯ್ಯ (Siddaramaiah) ಜೊತೆ ಸಿನಿಮಾ ತಾರೆಯರಾದ ಶಿವರಾಜಕುಮಾರ್ (Shivarajkumar), ದುನಿಯ ವಿಜಯ್ (Duniya Vijay), ರಮ್ಯಾ (Ramya) ಮತ್ತು ಅವರ ಬೆಂಬಲಿಗರ ದಂಡೇ ಇತ್ತು. ಅವರ ಪ್ರಚಾರದಲ್ಲಿ ಎದ್ದು ಕಂಡ ಅಂಶವೆಂದರೆ, ಕಾರ್ಯಕರ್ತರು ಮತ್ತು ಬೆಂಬಲಿಗರ ಕೈಯಲ್ಲಿದ್ದ ಹಳದಿ ಬಣ್ಣದ ಧ್ವಜಗಳು. ಅ ಧ್ವಜಗಳ ನಡುವೆ ಸಿದ್ದರಾಮಯ್ಯನವರ ಫೋಟೋ ಇದೆ. ಕ್ಷೇತ್ರದಲ್ಲಿ ಮೊನ್ನೆಯಷ್ಟೇ ಕೇಂದ್ರ ಗೃಹ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಪ್ರಚಾರ ನಡೆಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More