Assembly polls: ಯಶವಂತಪುರದ ಚಹಾ ಮಾರುವ ಯುವಕ ತಾನು ಕೂಡಿಟ್ಟ ರೂ. 50,000 ಗಳನ್ನು ಜೆಡಿಎಸ್ ಅಭ್ಯರ್ಥಿಯ ಚುನಾವಣಾ ಖರ್ಚಿಗೆ ನೀಡಿದ!

ಅರುಣ್​ ಕುಮಾರ್​ ಬೆಳ್ಳಿ

Updated on: Mar 28, 2023 | 5:38 PM

ಕುಮಾರಸ್ವಾಮಿಯವರು ಹಣದ ಚೀಲವನ್ನು ಜನರ ಸಮ್ಮುಖದಲ್ಲಿ ಜವರಾಯಿಗೌಡರಿಗೆ ನೀಡುವ ಮೊದಲು ಬಸವರಾಜುಗೆ ಪಕ್ಷ, ಜವರಾಯಿಗೌಡ ಮತ್ತು ವೈಯಕ್ತಿಕವಾಗಿ ಧನ್ಯವಾದಗಳನ್ನು ಸಲ್ಲಿಸುತ್ತಾ, ಇಂಥ ಜನರಿಂದಲೇ ಜೆಡಿಎಸ್ ಪಕ್ಷ ಉಳಿದಿದೆ ಎಂದರು.

ಬೆಂಗಳೂರು: ಇದಪ್ಪ ಪಕ್ಷದ ಬಗ್ಗೆ ಅಭಿಮಾನ ಇಟ್ಟುಕೊಳ್ಳೋದು ಅಂದ್ರೆ! ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಮಾತುಗಳನ್ನು ಕೇಳಿಸಿಕೊಂಡರೆ ವಿಷಯವೇನು ಅಂತ ನಿಮಗೆ ಗೊತ್ತಾಗುತ್ತದೆ. ಯಶವಂತಪುರದ ವಿಧಾನ ಸಭಾ ಕ್ಷೇತ್ರದ ತಿಪ್ಪೇನಹಳ್ಳಿ ಗ್ರಾಮದಲ್ಲಿ ಚಹಾ ಅಂಗಡಿ ನಡೆಸುವ ಬಸವರಾಜು (Basavaraju) ಹೆಸರಿನ ಯುವಕ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜವಾರಾಯಿಗೌಡರ (Javarayigowda) ಚುನಾವಣಾ ಖರ್ಚಿಗೆ ತಾನು ಕೂಡಿಟ್ಟಿದ್ದ 50,000 ರೂ. ಗಳನ್ನು ನೀಡಿದ್ದಾರೆ. ಕುಮಾರಸ್ವಾಮಿಯವರು ಹಣದ ಚೀಲವನ್ನು ಜನರ ಸಮ್ಮುಖದಲ್ಲಿ ಜವರಾಯಿಗೌಡರಿಗೆ ನೀಡುವ ಮೊದಲು ಬಸವರಾಜುಗೆ ಪಕ್ಷ, ಜವರಾಯಿಗೌಡ ಮತ್ತು ವೈಯಕ್ತಿಕವಾಗಿ ಧನ್ಯವಾದಗಳನ್ನು ಸಲ್ಲಿಸುತ್ತಾ, ಇಂಥ ಜನರಿಂದಲೇ ಜೆಡಿಎಸ್ ಪಕ್ಷ ಉಳಿದಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.