‘ಗರಡಿ’ ಚಿತ್ರದ ಸುದ್ದಿಗೋಷ್ಠಿಗೆ ವಿಶೇಷ ರೀತಿಯಲ್ಲಿ ಎಂಟ್ರಿಕೊಟ್ಟ ಯೋಗರಾಜ್ ಭಟ್

Updated on: Jun 14, 2023 | 1:42 PM

ಯೋಗರಾಜ್ ಭಟ್​ ಅವರು ‘ಗರಡಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಗೆ ಭಟ್ರು ತಮಟೆ ಬಾರಿಸುತ್ತಾ ಬಂದಿದ್ದಾರೆ.

ನಿರ್ದೇಶಕ ಯೋಗರಾಜ್ ಭಟ್ ಅವರು ಏನೇ ಮಾಡಿದರೂ ಅದರಲ್ಲಿ ಒಂದು ವಿಶೇಷತೆ ಇರುತ್ತದೆ. ಈಗ ಅವರು ‘ಗರಡಿ’ ಸಿನಿಮಾ (Garadi Movie) ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಗೆ ಭಟ್ರು ತಮಟೆ ಬಾರಿಸುತ್ತಾ ಬಂದಿದ್ದಾರೆ. ಯೋಗರಾಜ್ ಭಟ್ಟರಿಗೆ (Yogaraj Bhat) ನಿರ್ಮಾಪಕ ಬಿಸಿ ಪಾಟೀಲ್ ಸಾಥ್ ನೀಡಿದ್ದಾರೆ. ವೇದಿಕೆಯ ಮೇಲೂ ತಮಟೆ ಹೊಡೆದು ಕಾರ್ಯಕ್ರಮ ಆರಂಭಿಸಲಾಯಿತು ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jun 14, 2023 01:31 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More