ಯೋಗರಾಜ್ ಭಟ್ (Yogaraj Bhat) ನಿರ್ದೇಶನದ ‘ಗರಡಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದಲ್ಲಿ ಯಶಸ್ ಸೂರ್ಯ, ಬಿ.ಸಿ. ಪಾಟೀಲ್, ಸಾಯಿ ಕುಮಾರ್, ಸೋನಲ್ ಮಾಂತೆರೂ, ನಿಶ್ವಿಕಾ ನಾಯ್ಡು ಮುಂತಾದವರು ನಟಿಸಿದ್ದಾರೆ. ನಟ ದರ್ಶನ್ (Darshan) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಇಂದು (ಅಕ್ಟೋಬರ್ 16) ಈ ಸಿನಿಮಾದ ಹೊಸ ಹಾಡು ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ಪ್ರಯುಕ್ತ ಬೆಂಗಳೂರಿನಲ್ಲಿ ಚಿತ್ರತಂಡ ಸುದ್ದಿಗೋಷ್ಠಿ ನಡೆಸುತ್ತಿದೆ. ಇದರಲ್ಲಿ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಭಾಗಿ ಆಗಿದ್ದಾರೆ. ‘ಗರಡಿ’ ಸಿನಿಮಾದ ಪ್ರೆಸ್ ಮೀಟ್ ಲೈವ್ (Garadi Movie Press Meet) ವಿಡಿಯೋ ಇಲ್ಲಿದೆ..
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.