ಬೃಂದಾ ಆಚಾರ್ಯ, ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ ಮುಂತಾದವರು ನಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ (Kausalya Supraja Rama) ಸಿನಿಮಾದ ಪ್ರೀಮಿಯರ್ ಶೋ ಬೆಂಗಳೂರಿನಲ್ಲಿ ನಡೆದಿದೆ. ಶಶಾಂಕ್ ನಿರ್ದೇಶನದ ಈ ಸಿನಿಮಾ ನೋಡಿ ಯೋಗರಾಜ್ ಭಟ್ (Yogaraj Bhat) ಅವರು ಫಿದಾ ಆಗಿದ್ದಾರೆ. ಚಿತ್ರದ ಬಗ್ಗೆ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಇಂಥ ಒಂದು ಕೌಟುಂಬಿಕ ಕಥಾಹಂದರ ಇರುವ ಸಿನಿಮಾದ ಅವಶ್ಯಕತೆ ಬಹಳ ಇತ್ತು. ಸರಿಯಾದ ಸಮಯಕ್ಕೆ ಈ ಸಿನಿಮಾ ಬಂದಿದೆ. ಕೃಷ್ಣ ಮತ್ತು ಮಿಲನಾ ದಂಪತಿಯ ನಟನೆಗೆ ರಾಯಲ್ ಸೆಲ್ಯೂಟ್. ಇನ್ನುಳಿದ ಎಲ್ಲರ ಅಭಿನಯವೂ ಚೆನ್ನಾಗಿದೆ. ಈ ಸಿನಿಮಾವನ್ನು ಎಲ್ಲರೂ ನೋಡಿ ಹರಸಿ. ಜೈ ಕೌಸಲ್ಯ’ ಎಂದು ತಮ್ಮದೇ ಶೈಲಿಯಲ್ಲಿ ವಿಮರ್ಶೆ ತಿಳಿಸಿದ್ದಾರೆ ಯೋಗರಾಜ್ ಭಟ್.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.