AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya: ಅಯೋಧ್ಯೆ ಪ್ರವಾಸದ ವೇಳೆ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸಿಎಂ ಯೋಗಿ ಆದಿತ್ಯನಾಥ್

Ayodhya: ಅಯೋಧ್ಯೆ ಪ್ರವಾಸದ ವೇಳೆ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸಿಎಂ ಯೋಗಿ ಆದಿತ್ಯನಾಥ್

ಸುಷ್ಮಾ ಚಕ್ರೆ
|

Updated on: Aug 06, 2024 | 7:15 PM

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 2 ದಿನಗಳ ಕಾಲ ಅಯೋಧ್ಯೆ ಪ್ರವಾಸ ಕೈಗೊಂಡಿದ್ದು, ಇಂದು ಸಂಜೆ ರಾಮ ಮಂದಿರದಲ್ಲಿ ಶ್ರೀರಾಮ ಲಲ್ಲಾನಿಗೆ ಪೂಜೆ ಸಲ್ಲಿಸಿದ್ದಾರೆ. ಇಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲು ಮತ್ತು ನಗರದಲ್ಲಿ ಪ್ರಸ್ತುತ ಕಾನೂನು ಜಾರಿ ಪರಿಸ್ಥಿತಿಯನ್ನು ನಿರ್ಣಯಿಸಲು ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಲಿದ್ದಾರೆ.

ಅಯೋಧ್ಯೆ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ತಮ್ಮ ಎರಡು ದಿನಗಳ ಪ್ರವಾಸಕ್ಕೆ ಅಯೋಧ್ಯೆಗೆ ಭೇಟಿ ನೀಡಿದ್ದು, ಅಲ್ಲಿ ಶ್ರೀರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ರಾಮ್ ಲಲ್ಲಾನ ವಿಗ್ರಹದ ಮುಂದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ ನಮಸ್ಕರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಶ್ರೀರಾಮ ಜನ್ಮಭೂಮಿ ದೇವಸ್ಥಾನಕ್ಕೆ ಭೇಟಿ ನೀಡುವ ಮೊದಲು, ಸಿಎಂ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯ ಮತ್ತೊಂದು ಮಹತ್ವದ ಧಾರ್ಮಿಕ ಸ್ಥಳವಾದ ಹನುಮಾನ್‌ಗರ್ಹಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ